ಮಕ್ಕಳ ಮಂದಾರ -ಮಕ್ಕಳ ತೋಟದ ಬರಹಗಳ ಪದ ಮಾಲೆ

Saturday 5 September 2015

ದಿವ್ಯ ಜ್ಯೋತಿ.

ದಿವ್ಯ ಜ್ಯೋತಿ
,,,,,,,,,,,,,,,,,,,,,
ಕತ್ತಲೂ ಸುತ್ತಲೂ
  ಹಿಂಬಾಲಿಸಿದೆ ಎತ್ತಲೂ...
ಹಣವಿದ್ದಾಗ ಮಾತ್ರ ಸುಳಿದಾಡುವ ಬಂಧು ಬಳಗದಂತೆ
ಬೆಳಕಿದ್ದಾಗ  ಮಾತ್ರ ಜೊತೆ ಇಣುಕುವ
ನೆರಳು ಕೂಡ ಮಾಯ....!
ಕತ್ತಲು ನುಂಗಿದ ನನ್ನ ಸಹಾಯಕ್ಕೆ
ಬೆಳಕು ಕೂಡ ವಿಧಿ ಜೊತೆಸೇರಿ ಬೆದರಿ ನಿಂತಿತ್ತು.
ಆದರೆ. ...
       ಅದ್ಯಾವುದೋ  ಮಾಯಾ ಶಿಖರದಿಂದ
       ಬಂದಳು  ಸಿಂಹಿಣಿ....!
        ಕತ್ತಲನು ಬೆನ್ನಟ್ಟಿ ಬೇಟಿಯಾಡಿದಳು ನನ್ನ.
       ನಾನೀಗ ಅವಳ ಪಾಲು...!
          ಅವಳ ಕಣ್ಣ ವಜ್ರ ಶೋಭೆಗೆ
          ಆಂಗ್ಲರಂತೆ ನಡುರಾತ್ರಿಯೇ ಇದ್ದಕಿದ್ದಂತೆ
           ನಮಗೆ ಸ್ವತಂತ್ರ ನೀಡಿ ಓಡಿತು.
          ಅವಳು ನನಗೆ ದಿವ್ಯ ಜ್ಯೋತಿ,
           ಬದುಕಿಗೆಲ್ಲ ಅವಳೇ ಸ್ಪೂರ್ತಿ.
ಅವಳು  ಕಾಂತಿ
ಕತ್ತಲಲಿದ್ದ ನನಗೆ ನವ ಬರವಸೆಯ ಕ್ರಾಂತಿ.

No comments:

Post a Comment