ಗುಬ್ಬಿಯ ಮನವಿ
ಬಾಯಿ ಆರಿದೆ
ದೇಹ ದಣಿದಿದೆ
ಸಾವೇ ಬಂದು ಕೇಕೆ ಹಾಕುತಿದೆ
ನೋವೇ ಗೂಡಲಿ ಟಿಕಾಣಿ ಹೂಡಿದೆ..
ಗುಟುಕು ನೀರು ಕೊಡಿ ತಾಯಿ..
ಮರಿ ಗುಬ್ಬಿಗಳೆಲ್ಲಾ ಗೂಡಲೇ ಬೆಂದಿವೆ ತಾಯೀ...
ನರಮಾನವ ಹೇಗೋ ಬದುಕುಳಿಯುವನು
ಧರೆಯೆಲ್ಲಾ ಉರಿದರು ಬುದ್ಧಿ ಕಲಿಯನು
ವಿಲಾಸಿ ಬದುಕಿಗೆ ದಾಸನಾಗಿ
ವಿನಾಶದೂರಿಗೆ ಹೊರಟಿಹನು..
ವಿಶ್ವಾಪುರದ ನೆಮ್ಮದಿ ಕದಡಿ
ವನ್ಯಜೀವಿಗಳ ಸಂಕುಲವ ಸಂಕಟಕ್ಕೆ ದೂಡಿ
ಧರೆಯೆಲ್ಲಾ ಶಕೆಯಲಿ ಬೆವರಿ ಬಸವಳಿದಿಹುದು
ಎಚ್ಚರವಾಗದೇನು ನಾಗರೀಕ ನರನೇ.?
ಧರೆ ಉಳಿಯದಿರೆ ನಿನ್ನ ಯಂತ್ರ ತಂತ್ರ
ಉಳಿಸವು ನಿನ್ನ ಜೀವನ ಸೂತ್ರ
ಜಪಿಸು ಬೇಗ ಹಸಿರು ಮಂತ್ರ
ಮತ್ತೆ ಧರೆಯೆಲ್ಲೆಡೆ ಬರಲಿ ನಿತ್ಯ ಚೈತ್ರ-ವರ್ಷ.
ರವಿರಾಜ್ ಸಾಗರ್.
No comments:
Post a Comment