ಮಕ್ಕಳ ಮಂದಾರ -ಮಕ್ಕಳ ತೋಟದ ಬರಹಗಳ ಪದ ಮಾಲೆ

Saturday 22 September 2018

ಮಹಾಕವಿಯ ಮಕ್ಕಳ ನಾಟಕ

ಮಕ್ಕಳ ನಾಟಕಗಳೆಂದರೆ ಅವರ ಸಮಸ್ಯೆ , ನೋವು, ಕಲಿಕೆ, ಸಮಾಜದ ವಾಸ್ತವ ಸಮಸ್ಯೆಗಳ ಉದ್ದುದ್ದ ಸಂಬಾಷಣೆ, ಹಿಂದಿನ ಯಾವುದೋ ವ್ಯಕ್ತಿ  ಚರಿತ್ರೆ ಅಭಿನಯ , ಇನ್ನಿತರೆ ಅಂಶಗಳತ್ತಲೇ ವಾಲುತ್ತಿರುವ ನಾಟಕಕಾರರಿಗಿಂತ ಕೊಂಚ ವಿಭಿನ್ನವಾಗಿ ಯೋಚಿಸಿ ಕುವೆಂಪು ಅವರು ಬರೆದ ವಿಶಿಷ್ಟ ಗೀತ ನಾಟಕ ಈ ಮೋಡಣ್ಣನ ತಮ್ಮ. ಬಹಳಷ್ಟು ವಿಷಯ , ವಸ್ತು ಸಂಭಾಷಣೆ ,ಭಾಷೆಯ ಬಳಕೆ ಮಕ್ಕಳ ಆಸಕ್ತಿ ಮತ್ತಿತರ ಅಂಶ ದತ್ತ ಗಮನವಿಟ್ಟು ಬರೆದ ವಿಶೇಷ ಪ್ರಯೋಗದ ನಾಟಕ ವಾಗಿ ಇದು ಗಮನ ಸೆಳೆಯಿತು. ಮಹಾಕಾವ್ಯ ಬರೆದರೂ ಮಕ್ಕಳ ಕಾವ್ಯ, ನಾಟಕಕ್ಕೂ ಕುವೆಂಪು ಅವರು ಅಂದೆ ತೊಡಗಿಕೊಂಡು ವಿಶಿಷ್ಟ ನಾಟಕ ಕವಿತೆ ಬರೆದು   ಮಕ್ಕಳ ಸಾಹಿತ್ಯ ವಿಸ್ತಾರಗೊಳಿಸಿದ್ದಾರೆ.ಕೆಲವರಿಂದ ಮಕ್ಕಳ ಸಾಹಿತ್ಯ ಚರ್ಚೆ  ನಿರ್ಲಕ್ಷೆ ಗೋಳಗಾದದ್ದೂ ಮಾತ್ರ ಗಂಭೀರ ವಿಷಯ.

No comments:

Post a Comment