ಮಕ್ಕಳ ಮಂದಾರ -ಮಕ್ಕಳ ತೋಟದ ಬರಹಗಳ ಪದ ಮಾಲೆ

Monday 2 October 2023

ಸುಳ್ಳೂರಿನಲ್ಲಿ ಸಮುದಾಯದ ಸಹಭಾಗಿತ್ವದಲ್ಲಿ ಶಾಲಾ ಸ್ವಚ್ಚತೆ.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸುಳ್ಳೂರಿನಲ್ಲಿ ಮಹಾತ್ಮ ಗಾಂಧಿ ಜಯಂತಿ ಪ್ರಯುಕ್ತ ಶ್ರಮದಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ವಿಶೇಷವಾಗಿ ಗ್ರಾಮದ  ಪಾಲಕರು,ಯುವಕರು ಎಸ್ ಡಿ ಎಂ ಸಿ ಸಮಿತಿಯವರು ಶಾಲಾ ಸ್ವಚ್ಛತೆಯ ನೇತೃತ್ವ ವಹಿಸಿದ್ದರು. ಅಂಗನವಾಡಿ ಕಾರ್ಯಕರ್ತರು ಆಶಾ ಕಾರ್ಯಕರ್ತೆಯರು ಶಾಲಾ ಶಿಕ್ಷಕರು ಮಕ್ಕಳು ಶಾಲಾ ಸ್ವಚ್ಚತೆಯಲ್ಲಿ ನಿರತರಾಗಿರುವುದು ವಿಶೇಷವಾಗಿತ್ತು. ಸಮುದಾಯ ಮನಸ್ಸು ಮಾಡಿದರೆ ಮಾತ್ರ ಸರ್ಕಾರಿ ಶಾಲಾ ಸಬಲೀಕರಣ ಸಾಧ್ಯ. ಗಾಂಧಿ ಜಯಂತಿ ಪ್ರಯುಕ್ತ ಇದೊಂದು ಸಣ್ಣ ಪ್ರಯತ್ನ ಎಂದು ಶಿಕ್ಷಕರಾದ ರವಿಚಂದ್ರ ಅವರು ಹೇಳಿದರು. ಎಸ್ ಡಿ ಎಂ ಸಿ ಅಧ್ಯಕ್ಷರಾದ ರಾಘು ಬಿ, ಶಿಕ್ಷಕಿ ಕಲ್ಪನಾ,ದೀಪಾ, ಅಣ್ಣಪ್ಪ ಅವರು ಹಾಜರಿದ್ದರು. 

No comments:

Post a Comment