ಮಕ್ಕಳ ಮಂದಾರ -ಮಕ್ಕಳ ತೋಟದ ಬರಹಗಳ ಪದ ಮಾಲೆ

Sunday, 2 August 2015

ಕತ್ತಲೆ ಕರೆದಾಗ

ಕತ್ತಲೆ ಕರೆದಾಗ..
"""""""""""""""
ಹಗಲು ಓಡಿ ಬಂತು
ಕತ್ತಲೆ ಕರೆದಾಗ...
ಪಾಪ..ಕತ್ತಲೆ ಮಾಯವಾದಳು.
         ಕನವರಿಕೆಯಲಿ ಕತ್ತಲೆ..
          ಹಗಲುಗನಸು ಕಂಡಳು.
           ರವಿ-ಚಂದ್ರರು ಸ್ಪರ್ಧೆಗೆ ಇಳಿದರು.
             ಧರಣಿ ನಗದೆ ಅಳದೆ...
             ಮಳೆ. ಚಳಿ.ಬಿಸಿಲಿಗೆ ಮೈವೂಡ್ಡಿ
             ಹಸಿರಾದಳು.
ಕತ್ತಲೆ ಕರೆದಾಗೆಲ್ಲ
  ಬೆಳಕು ಕದ್ದು ಓಡಿ ಬಂದರೂ ..
ಇನ್ನೂ ಸೇರಲಾಗಿಲ್ಲ. .

Monday, 20 July 2015

ಪ್ರೇಮ ಚಿಕಿತ್ಸೆ

ಪ್ರೇಮ ಚಿಕಿತ್ಸೆ
'''''''''"""""'''
ಬನದ ತುಂಬಾ
ಬಣ್ಣ ಬಣ್ಣದ ಹೂವು. ..
ವಿಧವಿಧದ  ದುಂಬಿ .
ಯಾವ ಹೂವಿಗೆ
ಯಾವ ದುಂಬಿಯೋ...
ಯಾವ ದುಂಬಿಗೆ
ಎಲ್ಲಿಯ ಹೂವೋ....!
ಬೆಸೆದವರಾರೋ...ಹೊಸೆದವರಾರೊ....?
ಆದಿ ಅಂತ್ಯ ಅರಿಯದ ಮುಗ್ಧ ಪ್ರೇಮ ಸಂಬಂಧ.
            ನೂರು ಬಣ್ಣದ ಹೂ ಚೆಲುವು
            ಮೈದುಂಬಿದೆ ನನ್ನ ಮನವು..
             ಎಲ್ಲ ಹೇಗೆ ಹೇಳಲಿ...
       ಹೂ ದುಂಬಿಯ
       ಒಲವ ಸೆಳೆತ
        ಬಾವ ಮಿಳಿತ...
       ಅಂಟು ರೋಗ ನನಗೂ... ತಗುಲಿದೆ.!
       ಪ್ರೇಮ ಚಿಕಿತ್ಸೆ ಬೇಕಿದೆ.
       ಮನವಿ  ಮಾಡುವೆ
        ಅನುಮತಿಸಿ....
        ಒಲವ ವೈಧ್ಯಾಲಯದ ವಿಳಾಸ ತಿಳಿಸಿ.
( ನನ್ನ " ರವಿರಾಜಮಾರ್ಗ " ಬಾವ ಸಂಕಲನ ದಿಂದ)

Wednesday, 22 April 2015

ಹೇಳಲಾರೆ ಕಾರಣ. .!


    1    .ದಿಗಿಲು. ..!
    ..........
    ತೆರೆದಿದೆ ಬಯಕೆಯ ಬಾಗಿಲು
    ಸೆಳೆಯುತಿದೆ ತಾರೆಗಳ ಮುಗಿಲು
    ಕೆಣಕುತಿದೆ ಕಣ್ಣೊಳಗೆ...
    ಆಸೆಯ ಕಡಲು
    .... ಕ್ಷಮಿಸಿ ..!
    ಎಲ್ಲ ಹೇಳಲು
    ಕೊಂಚ ದಿಗಿಲು. .!
    ಜಾಲದೊಳಗೆ ಜಾಲಿ ನಾನು
    ಜಾರಿ ಬೀಳುವ ಮುನ್ನ
    ಜಿಗಿದು ಮಬ್ಬು ಕೊಡವಿದೆ.
    ಬುದ್ಧಿ ಹೇಳಿದೆ
    ಮನಸಿಗೆ...!
    ( ಇನ್ನೂ ಇದೆ. . "ಹೇಳಲಾರೆ ಕಾರಣ. ".. ಬಾವ ಸಂಕಲನದಿಂದ ನಿಮಗಾ..
      2.   ಛಲ. .ಫಲ. ..
      ..................
      ಏಸೊಂದು ಕನಸುಗಳೊಂದಿಗೆ ಈಜಿದೆ....
      ಆಕಾಶವ ಮುಟ್ಟಿ ಬಿಡಲೆಂದು
      ಅವಕಾಶಗಳ ಸೃಷ್ಟಿಸಿಕೊಂಡು ...
      ಕನಸುಗಳ ಮುಂಗಾರಲಿ ವರ್ಷವಿಡೀ ನೆನೆದೆ.
      ಶ್ರಮದ ವೃಕ್ಷದಡಿ
      ಛಲ ನನ್ನದು...
      ಫಲ ... ಪರಿಣಾಮದ ಚಿಂತೆಯಿಲ್ಲ..!
      ಗೆಲ್ಲುವ ಹಂಬಲ...ಚಫಲ...
      ಹೂಮಾಲೆಯೂ ಇದೆ.
      3.ನನ್ನ ಪ್ರೇಮ ಪತ್ರ
        ಎಣಿಸಿರಲಿಲ್ಲ ನಾನು...
        ನನ್ನ ಪ್ರೇಮ ಪತ್ರಕೆ
        ಕಣ್ಣೀರ ಉತ್ತರ ಸಿಗಬಹುದೆಂದು...!
        ಕಾರಣ ಕೇಳಿದರೆ ಅವಳಂದಳು...
        ಕಣ್ಣೀರಲ್ಲ... ಪನೀರಿದು......
        ನನಗೀಗ ನಿನ್ನದು
        ನೂರನೆಯ ಪ್ರೇಮ ಪತ್ರ. ....!
        ಅಂದಾಗ ಜೋಗ ಜಲಧಾರೆ ಹರಿಯಿತು
        ನನ್ನ ಕಣ್ಣಲ್ಲಿ. .,!

Monday, 20 April 2015

ಚಿನ್ನದ ಗೋರಿಯಲಿ ಮಲಗಿದಾರೆ ಮಾರ್ರೇ..!

ಚಿನ್ನದ ಗೋರಿಯಲಿ ಮಲಗಿದಾರೆ.....!
...................................
ಚಿನ್ನದ ಕಣಗಳ ರಾಸಿಯ
ಮರುಭೂಮಿಯಲಿ...
ನೀರಿಗಾಗಿ ಅಲೆದೆ..!
ನೀರಿರಲಿ... ಮರೀಚಿಕೆಯೂ ಕಾಣಲಿಲ್ಲ. ...!
ಮಡಿದ  ಹಲವರ ಅಸ್ಥಿಗಳು
ಆ ಚಿನ್ನದ ರಾಶಿಯ ಮೇಲೆಯೇ ಇವೆ.
     ಧರೆಯ ಬಗೆದು
     ಚಿನ್ನ ಕೂಡಿಟ್ಟ
     ಕೋಟಿ ಕೋಟಿ ಕುಳದವರ ಅಸ್ಥಿಗಳೂ
    ಸಾಮಾನ್ಯ ಅನಾಥರ ಅಸ್ಥಿಗಳ ನಡುವೆಯೇ ನರಳುತಿವೆ.
ಕೋಟಿ ಪಾಪಗಳೂಂದಿಗೆ ಕೊರಗುತ....!
        ಎಂತಹ ಅದೃಷ್ಟ. .!
ಚಿನ್ನದ ಗೋರಿಯಲಿ ಮಲಗಿದಾರೆ ಮಾರ್ರೇ....!

Wednesday, 1 April 2015

ಚಂದ್ರ ಮತ್ತು ತಾವರೆ

ಚಂದ್ರ ಮತ್ತು ತಾವರೆ
.....................
ಮಲಗಬೇಕು. ....
ಆದ್ರೆ ನಿದ್ರೆ ಬರದು ಕಣೇ. ..
      ಮುಂಜಾವಲಿ ಕವಿದ
     ಒಂಚೂರು ನಿದಿರೆಯಲಿ
      ಮತ್ತೆ ನೀನೇ ಕಣೇ. ..
      ಕನಸಲೆಲ್ಲಾ ಆವರಿಸಿ
       ಕಾಯಕ ಮರೆಸಿ
       ಕಾಡುವ ನೀನು
       ಕಾದಿದ್ದು ನನಗೇ ತಾನೇ...?
ಎಂದು ರಾತ್ರಿಯೆಲ್ಲ ಅಲೆದ ಚಂದ್ರ
ತಾವರೆಯ ಕೇಳಿದ. !..
       ಕೆಸರಲರಳಿದ ತಾವರೆ
      ನೀರಲೆಗಳ ನಡುವೆ ನಾಚಿ
      ಕೆಂಪೇರಿತು....!
ಧರೆಗಿಳಿದು ಬರುವಂತೆ
ಸಂದೇಶ ಕಳುಹಿಸಿದ್ದ ಕಂಡು
ಚಂದ್ರ ನಲಿದು ಬೆಳದಿಂಗಳ ಸುರಿದನು.

Saturday, 28 February 2015

ಮೈತ್ರಿ

'ಮೈತ್ರಿ' - ಬಹಳ ದಿನಗಳ ನಂತರ ಕನ್ನಡದಲ್ಲಿ ನಾನು ನೋಡಿದ ಒಂದು ಚೆಂದದ ಸಿನೆಮಾ. ದಯವಿಟ್ಟು ತಪ್ಪದೆ ಈ ಚಿತ್ರ ನೋಡಿ ಎಂಬುದು ನನ್ನೆಲ್ಲಾ ಗೆಳೆಯರಿಗೆ ನನ್ನ ಮನವಿ. ಯಾಕೆಂದರೆ ಒಂದು ಒಳ್ಳೆಯ ಸಿನೆಮಾ ಬಂದಾಗ ನಾವು ಅದನ್ನು ನೋಡದಿದ್ದರೆ , ಪ್ರೋತ್ಸಾಹಿಸದಿದ್ದರೆ, ಅಂತಹ ಒಳ್ಳೆಯ ಪ್ರಯತ್ನ ಮಾಡಿದವರ ಜತೆಗೆ ನಾವು ನಿಲ್ಲದಿದ್ದರೆ ಕೊನೆಗೆ ನಮಗೆ ಉಳಿಯುವುದು ಅದೇ 'ಮಚ್ಚು ಲಾಂಗು- ಐಟಂ ಸಾಂಗು' ಚಿತ್ರಗಳೇ. ಕನ್ನಡದಲ್ಲಿ ಒಳ್ಳೆಯ ಚಿತ್ರಗಳೇ ಬರಲ್ಲ ಗೊಣಗೋರು, ಕಂಪ್ಲೇಂಟ್ ಮಾಡೋರು ಈ ವಿಭಿನ್ನ ಪ್ರಯತ್ನವನ್ನು ನೋಡಿ, ಬೆಂಬಲಿಸಿ, ಇಲ್ಲವಾದಲ್ಲಿ ನಮಗೆ ಒಳ್ಳೆಯ ಚಿತ್ರಗಳು ಬರ್ತಿಲ್ಲ ಅಂತ ಟೀಕಿಸುವ ಹಕ...್ಕು ಅಧಿಕಾರ ಇರಲ್ಲ. ಬಿ. ಎ೦. ಗಿರಿರಾಜ್ ನಿರ್ದೇಶನದ, ಪುನೀತ್ ರಾಜ್ ಕುಮಾರ್ ಹಾಗೂ ಮೋಹನ್ ಲಾಲ್ ತಾರಾಗಣದ ಈ ಚಿತ್ರ ತನ್ನ ಹಲವು ವಿಶೇಷತೆಗಳಿಂದ ಗಮನಸೆಳೆಯುತ್ತದೆ. ಇತರ ಕಮರ್ಷಿಯಲ್ ಚಿತ್ರಗಳಂತೆ ಅಬ್ಬರದ ಡೈಲಾಗ್ ಗಳು, ಅಪ್ಪಳಿಸುವ ಸಂಗೀತ, ಹೀರೋಯಿಸಂ ಮೆರೆಸುವ ಫೈಟ್ ಗಳು, ಸೊಂಟ ಕುಣಿಸುವ ಹೀರೋಯಿನ್ ಗಳು, ಐಟಂ ಸಾಂಗ್ ಗಳು ಯಾವುದೂ ಇಲ್ಲದೆಯೂ, ಪುನೀತ್ ಹಾಗೂ ಮೋಹನ್ ಲಾಲ್ ರಂತಹ ಇಬ್ಬರು ದೊಡ್ಡ ನಟರಿದ್ದರೂ ಅವರನ್ನು ಹೀರೋ ಆಗಿ ಮೆರೆಸದೆಯೂ ಚಿತ್ರ ಎಲ್ಲೂ ಬೋರ್ ಹೊಡೆಸದೇ ತನ್ನ ವಿಭಿನ್ನ ಕಥಾಹಂದರ ಹಾಗೂ ಬಿಗಿಯಾದ ನಿರೂಪಣೆ ಯ ಮೂಲಕ ಇಷ್ಟವಾಗುತ್ತದೆ. ಚಿತ್ರ ನೋಡುವಾಗ 'ಸ್ಲಂ ಡಾಗ್ ಮಿಲೆಯನೇರ್' ಚಿತ್ರದಿಂದ ಸ್ಫೂರ್ತಿ ಪಡೆದಿರುವಂತೆ ಕಂಡುಬಂದರೂ ಚಿತ್ರದಲ್ಲಿ ತುಂಬಿರುವ ಅಪ್ಪಟ ಕನ್ನಡದ ಛಾಯೆ ಮನಸ್ಸು ತುಂಬುತ್ತದೆ. ಕೇವಲ ಕಲಾತ್ಮಕ ಚಿತ್ರವಾಗಿ ಕಳೆದು ಹೋಗಬಹುದಾಗಿದ್ದ ಅಪಾಯದಿಂದ ಚಿತ್ರ ಪಾರಾಗಿದೆ ಮತ್ತು ಕಮರ್ಷಿಯಲ್ ಚಿತ್ರವಾಗಿಯೂ ಆಪ್ತವಾಗುತ್ತದೆ. ಒಂದೆರಡು ದೃಶ್ಯಗಳಂತೂ ಕಣ್ಣಂಚು ಒದ್ದೆಮಾಡುತ್ತವೆ. ಇದು ರಿಮೇಕ್ ಅಲ್ಲದ ನಮ್ಮ ಕನ್ನಡದ್ದೇ ಆದ ಸ್ವಮೇಕ್ ಸಿನೆಮಾ ಅನ್ನೋದು ತುಂಬಾ ಹೆಮ್ಮೆಯ ವಿಚಾರ. ಇಂತಹ ಒಂದು ಒಳ್ಳೆಯ ಗಟ್ಟಿ ಕಥೆಯ ಚಿತ್ರ ಕೊಟ್ಟ ಗಿರಿರಾಜ್ ಅವರಿಗೆ ಮತ್ತು ಇಂತಹದೊಂದು ವಿಭಿನ್ನ ಪಾತ್ರವನ್ನು ಒಪ್ಪಿಕೊಂಡ ಅಪ್ಪಿಕೊಂಡ ಪುನೀತ್ ಅವರಿಗೂ ಅಭಿನಂದನೆ.

ಜಾನಪದ ವಿಶ್ವವಿದ್ಯಾಲಯದ ಡಿಪ್ಲೋಮಾ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ ..

 ಜಾನಪದ ವಿಶ್ವವಿದ್ಯಾಲಯದ ಡಿಪ್ಲೋಮಾ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ . ಹಸೆ ಚಿತ್ತಾರ , ನಾಟಿ ವೈದ್ಯ ,ವಿವಿಧ ಜಾನಪದ ನಿಕಾಯಗಳಲ್ಲಿ ಸ್ನಾತಕೋತ್ತರ ಡಿಪ್ಲೋಮಾ ,ಡಿಪ್ಲೋಮಾ ...