ಮಕ್ಕಳ ಮಂದಾರ -ಮಕ್ಕಳ ತೋಟದ ಬರಹಗಳ ಪದ ಮಾಲೆ

Saturday 3 December 2016

82 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಬರಗೂರರ ಭಾಷಣ

82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ, ರಾಯಚೂರು
ದಿನಾಂಕ : 2, 3 ಮತ್ತು 4 - ಡಿಸೆಂಬರ್ 2016
ಸಮ್ಮೇಳನಾಧ್ಯಕ್ಷರ ಭಾಷಣ ನಾಡೋಜ ಡಾ. ಬರಗೂರು ರಾಮಚಂದ್ರಪ್ಪ
ಎಲ್ಲರಿಗೂ ನಮಸ್ಕಾರ,
ಈ ಸಮ್ಮೇಳನವನ್ನು ಉದ್ಘಾಟಿಸಿದ ಮಾನ್ಯ ಮುಖ್ಯಮಂತ್ರಿಯವರಾದ ಶ್ರೀ ಸಿದ್ದರಾಮಯ್ಯನವರೆ,                      ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಮನು ಬಳಿಗಾರ್ ಅವರೆ, ಕಾರ್ಯಕಾರಿ ಸಮಿತಿ ಮತ್ತು ಸ್ವಾಗತ ಸಮಿತಿಯ ಸಮಸ್ತರೆ, ಇಲ್ಲಿ ನೆರೆದಿರುವ ಮನಸ್ಸಿನ ಮನುಷ್ಯಬಂಧುಗಳೆ-         
ರಾಯಚೂರಿನಲ್ಲಿ ನಡೆಯುತ್ತಿರುವ ಈ 82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷನಾಗಿ                 ನನ್ನನ್ನು ಆಯ್ಕೆ ಮಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಮಾನ್ಯ ಅಧ್ಯಕ್ಷರು, ಪದಾಧಿಕಾರಿಗಳು,  ಜಿಲ್ಲಾಧ್ಯಕ್ಷರು, ಕಾರ್ಯಕಾರಿ ಸಮಿತಿಯ ಸಮಸ್ತರಿಗೆ ನಾನು ಆಭಾರಿಯಾಗಿದ್ದೇನೆ. ಅಧ್ಯಕ್ಷನಾಗಿ ಆಯ್ಕೆಯಾಗಿದ್ದೇನೆಂಬ ಮಾಹಿತಿ ಸಿಕ್ಕ ಕೂಡಲೇ ನನ್ನ ನೆನಪಿಗೆ ಬಂದವರು- ನನಗೆ ಅಕ್ಷರ ಕಲಿಸಿದ ಗುರುಗಳು ಮತ್ತು ಶಾಲೆಗೆ ಸೇರಿಸಿದ  ತಾಯಿ, ತಂದೆ ಆನಂತರ ನನ್ನನ್ನು ಬೆಳೆಸಿದ ಪ್ರಗತಿಪರ ಚಳವಳಿಗಳು, ಸಾರ್ವಜನಿಕ ಬದುಕಿನ ಬವಣೆಗಳ ಮುಖಾಮುಖಿಗೆ ಬೆನ್ನೆಲುಬಾಗಿ ನಿಂತ ಕುಟುಂಬವರ್ಗ ಮತ್ತು ಸ್ನೇಹಿತರು. ಒಂದೇ ವಾಕ್ಯದಲ್ಲಿ ಹೇಳುವುದಾದರೆ ‘ಸ್ನೇಹಿತರೇ ನನ್ನ ಸಂಪತ್ತು’. ಈ ಎಲ್ಲರಿಗೂ ನನ್ನ ಮೊದಲ ನಮನಗಳು.
ನನ್ನ ಅಧಿಕೃತ ಭಾಷಣವನ್ನು ಒಂದು ಸಂಕಟದ ಸಂವೇದನೆಯೊಂದಿಗೆ ಆರಂಭಿಸುತ್ತೇನೆ. ಸಂವೇದನೆ ಎಂಬ ಪದದಲ್ಲೇ `ವೇದನೆ’ಯಿದೆ. ವೇದನೆ ಮತ್ತು ಸಂವೇದನೆ ಒಂದಾದ ಕಾಲಘಟ್ಟ ನಮ್ಮದು. ಅಷ್ಟೇಕೆ ವೇದನೆಯೇ ಸಂವೇದನೆಯಾಗುತ್ತಿರುವ ವೈರುಧ್ಯ ವಲಯವೂ ನಮ್ಮದು. ಅಂದು
ಆಗಸ್ಟ್ 30-2015 ರ ಬೆಳಗ್ಗೆ. ಸಾಂಸ್ಕøತಿಕ ಲೋಕ ದಿಗ್ಭ್ರಮೆಗೊಂಡು ಮೂಕವಾದ ಮುಂಜಾವು. ಅದಕ್ಕೆ ಕಾರಣ ಎಂ.ಎಂ. ಕಲಬುರ್ಗಿಯವರ ಸಾವು.  ಕಲಬುರ್ಗಿಯವರನ್ನು ಕೊಂದ ಹಂತಕರನ್ನು ಶೀಘ್ರ ಪತ್ತೆ ಹಚ್ಚಿ ನಿಧಾನದ್ರೋಹದ ಕಳಂಕದಿಂದ ಮುಕ್ತವಾಗಬೇಕೆಂದು ಸರ್ಕಾರವನ್ನು ಒತ್ತಾಯಿಸುತ್ತೇನೆ. ಭಿನ್ನಾಭಿಪ್ರಾಯಗಳನ್ನು  ಬಲಿಪೀಠವಾಗಿಸಿದ ಆ ದಾರುಣದ ದಿನದ ನೆನಪು ನುಗ್ಗಿ ಬರುತ್ತಿರುವಾಗ ಎಂ.ಎಂ. ಕಲಬುರ್ಗಿಯವರ ಚೇತನಕ್ಕೆ ನನ್ನ ನಮನ ಸಲ್ಲಿಸಿ ಮಾತು ಮುಂದುವರೆಸುತ್ತೇನೆ.     
ನನ್ನ ಮುಂದೆ ಕುವೆಂಪು ಅವರ ಮಲೆನಾಡು ಇರಲಿಲ್ಲ. ಬೇಂದ್ರೆಯವರ ಸಾಧನಕೇರಿಯಿರಲಿಲ್ಲ. ಶಿವರಾಮಕಾರಂತರ ಕಡಲು ಇರಲಿಲ್ಲ. ಕೆ.ಎಸ್.ನ. ಅವರ ಮೈಸೂರು ಮಲ್ಲಿಗೆಯಿರಲಿಲ್ಲ. ಪು.ತಿ.ನ. ಅವರ ಮೇಲುಕೋಟೆಯಿರಲಿಲ್ಲ. ಬದುಕಿನ ಬೇಟೆಯಲ್ಲಿ ಬೆಳೆಯುತ್ತ ಬಂದ ಅನೇಕರಲ್ಲಿ ನಾನೂ ಒಬ್ಬ. ಈ `ಬೇಟೆ ಬದುಕಿನಲ್ಲಿ’ ಶ್ರೀಗಂಧದ ಮರಗಳಿರಲಿಲ್ಲ. ಜಾಲಿಯ ಮರಗಳಿದ್ದವು; ಜೊತೆಗೆ ಹೊಂಗೆ ಹುಣಸೆಮರಗಳಿದ್ದವು. ಕೋಗಿಲೆಯಿರಲಿಲ್ಲ ಕಾಗೆಗಳಿದ್ದವು, ಗುಬ್ಬಚ್ಚಿಗಳಿದ್ದವು. ಮುಗಿಲು ಮುನಿದು ಬಿರುಕುನೆಲದ ಕೆರೆಗಳಿದ್ದವು. ನಳನಳಿಸುತ್ತಲೇ ಕೂಳೆ ಹೊಲಗಳಾದ ಜಮೀನುಗಳಿದ್ದವು. ಹೆಡೆ ಎತ್ತಿದ ಹಾದಿಗಳಿದ್ದವು. ಹತ್ತಿರದಲ್ಲೇ ಊದುವ ಪ್ರೀತಿಪುಂಗಿಗಳಿದ್ದವು.  ಚಿತ್ತದಲ್ಲಿ ಬಿತ್ತಿ ಬೆಳೆಯುವ  ಭಾವನೆಗಳಿದ್ದವು. ಬರವಿಲ್ಲದ ಭೂಮಿಭಾವನೆಗಳಿಂದ ಬೆಳೆಯುತ್ತಲೇ ಚಿಂತನೆಯ ಚೌಕಬಾರದಲ್ಲಿ  ಕೊನೆಯ ಮನೆ ಸೇರಿ ಗೆಲ್ಲುವ ಆತ್ಮವಿಶ್ವಾಸವನ್ನು ಪಡೆದ ಬದುಕು ನನ್ನದು. ಇರುವಲ್ಲಿ ಮತ್ತು ಇರುವುದರಲ್ಲಿ ನಮ್ಮ ಸೃಜನಶೀಲತೆಯನ್ನು ಬೆಳೆಸಿಕೊಳ್ಳುವ ಸಂಕಲ್ಪ ನಮ್ಮದಾಗಬೇಕೆಂದು ನಂಬಿದವನು ನಾನು.  ಸೃಜನಶೀಲತೆಗೆ ಬಡವ-ಬಲ್ಲಿದ ಎಂಬ ಭೇದವಿಲ್ಲ. ಆದ್ದರಿಂದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ  ಅಧ್ಯಕ್ಷನಾಗಿರುವ ಈ ಸಂದರ್ಭದಲ್ಲಿ ನಾನು ಹೇಳುವುದಿಷ್ಟೆ: ಈ ಗೌರವ ನನ್ನಂತಹ ಅಸಂಖ್ಯಾತ ಆತ್ಮವಿಶ್ವಾಸಿಗಳಿಗೆ ಸಲ್ಲುವ
ಗೌರವ ; ಇಲ್ಲಿ ಅಧ್ಯಕ್ಷನಾದವನು `ನಾನು’ `ಅಲ್ಲ-`ನಾವು’. ಈ ನಾವುಗಳ ಸಂಕೇತವಾಗಿ `ನಾನು’  ಇಲ್ಲಿದ್ದೇನೆ; ನಾನು ಅಧ್ಯಕ್ಷನಾಗಿ ಇಲ್ಲಿರುವುದನ್ನು ಕಂಡು, ಕೇಳಿ ಸಂಭ್ರಮಿಸುವ ಸಮಸ್ತರೂ ಅಧ್ಯಕ್ಷರೇ ಎಂದು ಭಾವಿಸುತ್ತೇನೆ.
ಹೈದರಾಬಾದ್ ಕರ್ನಾಟಕವೆಂದು ಕರೆಯಲ್ಪಡುತ್ತಿರುವ ಕರ್ನಾಟಕದ ಈ ವಲಯದ ರಾಯಚೂರಿಗೆ ವಿಶಿಷ್ಟ ಇತಿಹಾಸವಿದೆ. ಕ್ರಿ.ಪೂ. 300ರಲ್ಲಿ ಅಶೋಕನ ಆಳ್ವಿಕೆಗೆ ಒಳಪಟ್ಟಿತ್ತೆಂದು ಉಲ್ಲೇಖವುಳ್ಳ ಮಸ್ಕಿಶಾಸನವು ಅಶೋಕನನ್ನು ದೇವನಾಂಪ್ರಿಯ, ಪ್ರಿಯದರ್ಶಿ ಅಶೋಕ ಎಂದು ಕರೆದ ಆರಂಭಿಕ ದಾಖಲೆಯೆಂದು ಹೇಳಲಾಗುತ್ತಿದೆ. ಶಾಂತಿಪ್ರಿಯ ಅಶೋಕನ ಶಾಸನವುಳ್ಳ ರಾಯಚೂರು ಸರ್ವದರ್ಮ ಸಮನ್ವಯದ ನೆಲೆಯೂ ಆಗಿದೆ. ಕಲ್ಯಾಣ ಕ್ರಾಂತಿಯ ಸಂದೇಶವನ್ನು ಪ್ರಸಾರಗೊಳಿಸುವ ಕಾರ್ಯದಲ್ಲಿ ರಾಯಚೂರು ಜಿಲ್ಲೆಯ ಪಾತ್ರ ಪ್ರಮುಖವಾಗಿದೆ. ‘ಕಾಯಕವೇ ಕೈಲಾಸ’ವೆಂಬ ಮಾತನ್ನು ಮೊದಲು ಬಳಸಿದ ಆಯ್ದಕ್ಕಿ ಮಾರಯ್ಯ ಈ ಜಿಲ್ಲೆಯ ವಚನಕಾರ. ಸಾಹಿತ್ಯ, ಸಂಗೀತ, ಚಿತ್ರಕಲೆಯಲ್ಲಿ ಅಪೂರ್ವ ಸಾಧಕರನ್ನು ಪಡೆದ ರಾಯಚೂರಿನ ಸಾಧಕರ ಪಟ್ಟಿ ದೊಡ್ಡದು ಪ್ರಸಿದ್ಧಿಯೂ ದೊಡ್ಡದು. (ಹೀಗಾಗಿ ನಾನು ಹೆಸರುಗಳನ್ನು ಪಟ್ಟಿಮಾಡಿಲ್ಲ)
ಹೈದರಾಬಾದ್ ಕರ್ನಾಟಕ ವಲಯವು ನಿಜಾಮರ ಆಳ್ವಿಕೆಯಲ್ಲಿದ್ದುದರಿಂದ ಇಲ್ಲಿ ಉರ್ದುವಿನ ಪ್ರಭಾವ ಸ್ವಾಭಾವಿಕವಾಗಿ ಹರಡಿಕೊಂಡಿದೆ. ಜೊತೆಗೆ ಗಡಿಭಾಗದ ಭಾಷೆಗಳ ಪ್ರಭಾವವೂ ಇದೆ. ಇದು ಹೋರಾಟಗಳ ಭೂವಲಯವೂ ಹೌದು. ನಿಜಾಮರ ವಿರುದ್ಧ ನಡೆದ ಕಾರ್ಯಾಚರಣೆಯಿಂದ 1948ರ ಸೆಪ್ಟಂಬರ್‍ನಲ್ಲಿ ಸ್ವತಂತ್ರವಾದ ಈ ಭೂಭಾಗದಲ್ಲಿ ರೈತ ಹೋರಾಟಗಳೂ ಇದ್ದವು. ನಿಜಾಮರ ದಮನದ ಜೊತೆಗೆ ರೈತ ಹೋರಾಟಗಳ ದಮನವೂ ನಡೆದ ವಿಪರ್ಯಾಸಕ್ಕೆ ತೆಲಂಗಾಣವನ್ನು ಒಳಗೊಂಡ ಈ ಭೂಭಾಗ ಸಾಕ್ಷಿಯಾದದ್ದು ಈಗ ಇತಿಹಾಸ. ಇಷ್ಟಾದರೂ ಇದು ಸೌಹಾರ್ದ ಸಂಸ್ಕøತಿಯ ಬೀಡು. ಸೂಫಿ ಸಂತರು ಮತ್ತು ತತ್ವ ಪದಕಾರರ ಪರಂಪರೆಯುಳ್ಳ ಭೂಮಿ. ಇಲ್ಲಿ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನವು ಸೌಹಾರ್ದ ಸಂಸ್ಕøತಿಯ ವಿಸ್ತರಣೆಗೆ ಕಾರಣವಾಗಲಿ, ಎಂದು ಹಾರೈಸುತ್ತೇನೆ.
ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಭಾಷಣವೆಂದರೆ ನೆರೆದ ಜನಕ್ಕೆ ಮತ್ತು ನಾಡಿಗೆ  ಕೊಡುವ ಸಂದೇಶವೆಂದು ತಿಳಿಯುತ್ತ ಬರಲಾಗಿದೆ. ಜನರು, ಸಾಹಿತಿಗಳ ಚರ್ಚೆ, ಚಿಂತನೆಗಳ ಮೂಲಕ ಬೌದ್ಧಿಕ ಬೆಳಕು ಪಡೆಯಲು ಬರುತ್ತಾರೆಂದೂ ಸಮ್ಮೇಳನದ ಚಿಂತನೆಗಳಿಂದ ಒಂದಿಷ್ಟು ಕಲಿಯುತ್ತಾರೆಂದೂ ಕಲಿಯಬೇಕೆಂದೂ ಆಶಿಸಲಾಗಿದೆ. ಇದು ನಿಜವಾದ ಆಶಯವೇ ಇರುಬಹುದು. ಆದರೆ ನನಗನ್ನಿಸುತ್ತದೆ: ಇಲ್ಲಿ ನೆರೆದಿರುವ ನೀವು ನಮ್ಮಿಂದ ಕಲಿಯುವುದಲ್ಲ. ವೇದಿಕೆಯ ಮೇಲಿರುವ ನಾವು ನಿಮ್ಮಿಂದ  ಕಲಿಯಬೇಕು. ನೀವು  ನಮ್ಮನ್ನು ನೋಡುವುದು ಮುಖ್ಯವಲ್ಲ; ನಾವು ನಿಮ್ಮನ್ನು ನೋಡುವುದು ಮುಖ್ಯ. ನಾವು  ನಿಮ್ಮನ್ನು ನೋಡುತ್ತಲೇ ನೀವಾಗುವುದು, ನೀವು ನಮ್ಮನ್ನು ನೋಡುತ್ತಲೇ  ನಾವಾಗುವುದು, ಹೀಗೆ ಪರಸ್ಪರ ಪ್ರವೇಶ ಪ್ರಕ್ರಿಯೆಯಲ್ಲಿ ತೊಡಗುವುದು ಮುಖ್ಯವೆಂದು ನಾನು ತಿಳಿದಿದ್ದೇನೆ. ಕನ್ನಡದ ಹೆಸರಲ್ಲಿ, ಕರ್ನಾಟಕದ ಹೆಸರಲ್ಲಿ, ಸಾಹಿತ್ಯಾಸಕ್ತಿಯಲ್ಲಿ ಇಲ್ಲಿ ನೆರೆದಿರುವ ಈ ಬಹು ದೊಡ್ಡ ಸಮೂಹವು ವೇದಿಕೆಯಲ್ಲಿರುವವರಿಗೊಂದು ವಿವೇಕದ ಎಚ್ಚರ ಎಂದು ನಾನು ಭಾವಿಸುತ್ತೇನೆ. ಆದ್ದರಿಂದ ನಮ್ಮಿಂದ ನೀವು ಕಲಿಯುವುದೆಷ್ಟೆಂದು ಲೆಕ್ಕ ಹಾಕುವುದರ ಬದಲು ನಿಮ್ಮಿಂದ ನಾವು ಕಲಿಯುವುದು ಬಹಳಷ್ಟಿದೆ ಎಂದು ತಿಳಿಯಬೇಕಿದೆ. ಒಂದು ಸಮ್ಮೇಳನಕ್ಕೆ ಇಷ್ಟೊಂದು ಅಪಾರ  ಸಂಖ್ಯೆಯಲ್ಲಿ ಸೇರಿದ್ದಾರಲ್ಲ,  ಇವರ ವಿಶ್ವಾಸಾರ್ಹತೆಗೆ ಧಕ್ಕೆ ತರಬಾರದು ಎಂಬ  ಎಚ್ಚರ  ನಮಗಿರಬೇಕು; ಅಪಾರ ನಿರೀಕ್ಷೆಯಿಂದ ನೆರೆದವರಿಗೆ ನಿರಾಶೆಯಂಟು ಮಾಡದಿರಬೇಕೆಂಬ ಹೊಣೆಗಾರಿಕೆ ನಮ್ಮದಾಗಬೇಕು. ಈ ಸಂದರ್ಭದಲ್ಲಿ ರಷ್ಯಾದ ಚಿಂತಕ ಪ್ಲೆಖನೋವ್ ಹೇಳಿದ ಒಂದು ಅಭಿಪ್ರಾಯ ನೆನಪಿಗೆ ಬರುತ್ತಿದೆ: “ಕಲಾಕಾರರು ಜನಗಳಿಂದ ಗೌರವ ಮತ್ತು ಮನ್ನಣೆಗಳನ್ನು ಬಯಸುತ್ತಾರೆ. ಜನರು  ಕಲಾಕಾರರಿಂದ ಜವಾಬ್ದಾರಿಯನ್ನು ಬಯಸುತ್ತಾರೆ.”
ಹೌದು; ಜನರು ನಮ್ಮಿಂದ ಜವಾಬ್ದಾರಿಯನ್ನು ಬಯಸುತ್ತಾರೆ. ಆದ್ದರಿಂದ ಸಾಂಸ್ಕøತಿಕ ಪ್ರತಿನಿಧಿಗಳೆಂಬ ಹಣೆಪಟ್ಟಿಯ ನಾವು ಆತ್ಮವಂಚನೆ ಮಾಡಿಕೊಳ್ಳಬಾರದು; ಜನರು ನಮ್ಮ ಮೇಲಿಟ್ಟಿರುವ  ವಿಶ್ವಾಸಕ್ಕೆ ವಂಚನೆ ಮಾಡಬಾರದು. ನಾವು ಜನಗಳಿಗೆ ಜವಾಬ್ದಾರರಾಗಬೇಕು. ಇದು ಈ ಸಮ್ಮೇಳನದಿಂದ ನಾವು ಕಲಿಯಬೇಕಾದ ಪ್ರಥಮ ಪಾಠ.
ಏಕೀಕರಣ, ಪ್ರತ್ಯೇಕೀಕರಣ ಮತ್ತು ಪರಕೀಯತೆ
ಕರ್ನಾಟಕದ ಏಕೀಕರಣವಾಗಿ 60 ವರ್ಷಗಳು ತುಂಬಿ ವಜ್ರ ಮಹೋತ್ಸವವನ್ನು ಆಚರಿಸುವ ಸಂಭ್ರಮದಲ್ಲಿ ಸಮ್ಮೇಳನ ನಡೆಯುತ್ತಿದೆ. ಸಹಜವಾಗಿಯೇ ಏಕೀಕರಣದ ಫಲಿತಗಳನ್ನು  ಕುರಿತ ಪ್ರಶ್ನೆ ಎದುರಾಗುತ್ತದೆ. ಕನ್ನಡ ಮಾತು  ಪ್ರಧಾನವಾಗಿರುವ ಪ್ರದೇಶಗಳೆಲ್ಲ ಒಂದಾಗಬೇಕೆಂಬ ಏಕೀಕರಣದ ಪ್ರಧಾನ ಆಶಯ ಬಹುಮಟ್ಟಿಗೆ ಈಡೇರಿದ್ದರೂ ಇನ್ನೂ ಕೆಲವು ಕನ್ನಡ ಮಾತಿನ ಪ್ರದೇಶಗಳು ಬೇರೆ ರಾಜ್ಯದಲ್ಲಿ ಉಳಿದಿವೆ. ಮಹಾರಾಷ್ಟ್ರ, ಕೇರಳ ಮತ್ತು ಕರ್ನಾಟಕದ ಗಡಿವಿವಾದ ಬಗೆಹರಿಸಲು ರಚಿತವಾದ ಮಹಾಜನ್  ಆಯೋಗದ ವರದಿಯು ಇನ್ನೂ ಅನುಷ್ಠಾನಗೊಂಡಿಲ್ಲ. ಕೇರಳದ ಕಾಸರಗೋಡು ಕರ್ನಾಟಕವಾಗಲಿಲ್ಲ.  ಆಂಧ್ರದಲ್ಲಿರುವ ಕನ್ನಡ ಪ್ರಧಾನ ಮಡಕಶಿರಾ ಕರ್ನಾಟಕಕ್ಕೆ ಸೇರಲಿಲ್ಲ. ತಮಿಳುನಾಡಿನಲ್ಲಿರುವ  ತಾಳವಾಡಿಫಿರ್ಕಾ, ಕೇರಳದಲ್ಲಿರುವ  ಕಾಸರಗೋಡು, ಹೊಸದುರ್ಗ.  ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆ, ಮುಂತಾದ ಕನ್ನಡ ಪ್ರಧಾನ  ಪ್ರದೇಶಗಳು ನಮ್ಮ ನಾಡಿನ ಭಾಗವಾಗಿಲ್ಲ. ಅಷ್ಟೇಕೆ ಕರ್ನಾಟಕ ಸರ್ಕಾರವು ಹೊರ ರಾಜ್ಯದ ಕೆಲವು ಪ್ರದೇಶಗಳಿಗೆ  ನೀಡಿರುವ ಅಧಿಕೃತ ಗಡಿಗ್ರಾಮ ಮನ್ನಣೆಯು ರಾಯಚೂರು ಪಕ್ಕದ ಮೆಹಬೂಬುನಗರ ಜಿಲ್ಲೆಯ ಕೃಷ್ಣಾ, ಗುರ್ಜಾಲೆ, ತಂಗಡಗಿ, ಕುಸಮುರ್ತಿ,  ಹೈನಾಪುರ, ಜೆಗುಂಟಾ, ಶುಕ್ರಲಿಂಗದಹಳ್ಳಿ, ಖಾನಾಪುರ, ಕುನಸಿ, ಹಾಲಂಪಲ್ಲಿ, ಕೊತ್ತಪಲ್ಲಿ ಗುಡೆವೆಲ್ಲೂರ್, ಇಂದುಪುರ-ಎಂಬ  ಹದಿನೂರು ಗ್ರಾಮಗಳಿಗೆ ಲಭ್ಯವಾಗಿಲ್ಲ. ಗೋವಾದಲ್ಲಿರುವ ಕನ್ನಡಿಗರ ಬವಣೆ ಬತ್ತಿಲ್ಲ. ಕರ್ನಾಟಕದ ಒಳನಾಡಿನವರಿಗೆ ಸಿಗುವ ಶೈಕ್ಷಣಿಕ ಮತ್ತು ಔದ್ಯೋಗಿಕ ಸೌಲಭ್ಯಗಳು ಕನ್ನಡಮಾಧ್ಯಮದಲ್ಲೇ ವ್ಯಾಸಂಗ ಮಾಡಿದ ಹೊರನಾಡಿನ ಕನ್ನಡಿಗರಿಗೆ ಪೂರ್ಣಪ್ರಮಾಣದಲ್ಲಿ ಸಿಗುತ್ತಿಲ್ಲ, ಸಿಗಬೇಕು. ಕರ್ನಾಟಕವು ಇನ್ನೂ ಒಳನಾಡು, ಗಡಿನಾಡು ಮತ್ತು ಹೊರನಾಡು ಎಂಬ ವಿಂಗಡನೆಯ ವಿಷಾದವನ್ನು ಒಡಲುರಿಯಾಗಿ ಅನುಭವಿಸುತ್ತಿದೆ. ಇಂಥ ಒಡಲುರಿ ಇರಬಾರದೆಂದೇ  ಅಂದು  ಏಕೀಕರಣದ ಹೋರಾಟ ಹುಟ್ಟಿಕೊಂಡಿತ್ತು. ಧಾರವಾಡದಲ್ಲಿ  20.07.1890ರಲ್ಲಿ ಸ್ಥಾಪಿತವಾದ  ಕರ್ನಾಟಕ ವಿದ್ಯಾವರ್ಧಕ ಸಂಘದ `ವಾಗ್ಭೂಷಣ’ ಪತ್ರಿಕೆಯಲ್ಲಿ ಆಲೂರು ವೆಂಕಟರಾಯರು. “ಕರ್ನಾಟಕವು ಒಂದಾಗದಿದ್ದರೆ ಕರ್ನಾಟಕದ ಸ್ಥಿರ ಏಳಿಗೆಯು ಎಂದೆಂದಿಗೂ ಸಾಧ್ಯವಿಲ್ಲ” ಎಂದು ಬರೆದರು. 1917ರ ಜನವರಿ 7ರಂದು ವಿದ್ಯಾವರ್ಧಕ ಸಂಘದ  ವ್ಯವಸ್ಥಾಪಕ ಸಮಿತಿಯು ಒಂದು ಗೊತ್ತುವಳಿಯನ್ನು ಸ್ವೀಕರಿಸಿ ಏಕೀಕರಣದ ಆಶಯವನ್ನು ದಾಖಲಿಸಿತು. “ಬ್ರಿಟಿಷ್ ಅಧಿಕಾರಕ್ಕೆ ಒಳಗಾದ. ಎಲ್ಲ ಕನ್ನಡ ಊರು, ತಾಲ್ಲೂಕು ಮತ್ತು ಜಿಲ್ಲೆಗಳನ್ನು ಒಟ್ಟುಗೂಡಿಸಿ, ಒಂದು ರಾಜಕೀಯ ವಿಭಾಗವನ್ನಾಗಿ ಮಾಡಿ, ಅದನ್ನು ಕರ್ನಾಟಕವೆಂದು ಕರೆಯಬೇಕು” ಎಂದು ಈ ಗೊತ್ತುವಳಿಯು ಕರೆ ನೀಡಿತು. 1915ರಲ್ಲಿ ಸ್ಥಾಪಿತವಾದ ಕನ್ನಡ ಸಾಹಿತ್ಯ ಪರಿಷತ್ತು ಏಕೀಕರಣದ ಹೋರಾಟಕ್ಕೆ ಒತ್ತಾಸೆಯಾಗಿ ನಿಂತಿತು. 1916ರಲ್ಲಿ  ಏಕೀಕರಣದ ಉದ್ದೇಶಕ್ಕಾಗಿಯೇ `ಕರ್ನಾಟಕ ಏಕೀಕರಣ ಸಭೆ’ ಎಂಬ  ಸಂಸ್ಥೆ ಸ್ಥಾಪನೆಯಾಯಿತು. ಆನಂತರದ ದಿನಗಳಲ್ಲಿ ಇದಕ್ಕೆ `ಕರ್ನಾಟಕ ಏಕೀಕರಣ ಸಂಘ’ ಎಂದು ಮರುನಾಮಕರಣ ಮಾಡಲಾಯಿತು. ಈ ಸಂಸ್ಥೆಯು ಏಕೀಕರಣದ ಉದ್ದೇಶಕ್ಕಾಗಿಯೇ 1926ರಿಂದ 1947ರೊಳಗೆ ಒಟ್ಟು 12 ಸಮ್ಮೇಳನಗಳನ್ನು ನಡೆಸಿತು. ನಮ್ಮ ದೇಶ ಸ್ವಾತಂತ್ರ್ಯಗಳಿಸಿದ ನಂತರವೂ ಏಕೀಕರಣದ ಹೋರಾಟ ಮತ್ತಷ್ಟು ಪ್ರಬಲಗೊಂಡಿತು. ವಿಶೇಷವೆಂದರೆ 1951ರಲ್ಲಿ ಕಮ್ಯುನಿಸ್ಟ್ ಪಕ್ಷವೂ ಏಕೀಕರಣಕ್ಕೆ ಬೆಂಬಲವಾಗಿ ನಿಂತಿತು. ಕಮ್ಯೂನಿಸ್ಟರು, ಸೋಷಲಿಸ್ಟರು ತಮ್ಮ ಸಮಾನತೆಯ ಆಶಯಗಳ ಮೂಲ ಆಶಯವನ್ನಿಟ್ಟುಕೊಂಡೇ ಏಕೀಕರಣದ ಅಗತ್ಯವನ್ನು ಪ್ರತಿಪಾದಿಸಿದರು. ಈ ನಡುವೆ 1952ರಲ್ಲಿ ಆಂದ್ರದ ಪೊಟ್ಟಿಶ್ರೀರಾಮುಲು ಅವರು ತೆಲುಗು ಮಾತಿನ ಪ್ರದೇಶಗಳ  ಏಕೀಕರಣಕ್ಕಾಗಿ  ಆಮರಣಾಂತ ಉಪವಾಸ ಆರಂಭಿಸಿದರು. 58 ದಿನಗಳ ಕಾಲ ಉಪವಾಸ ಸತ್ಯಾಗ್ರಹ ಮಾಡಿದ ಪೊಟ್ಟಿಶ್ರೀರಾಮುಲು ನಿಧನ ಹೊಂದಿ ಹುತಾತ್ಮರಾದರು. ಕನ್ನಡನಾಡಿನಲ್ಲಿ ಬಳ್ಳಾರಿಯ ರಂಜಾನ್ ಸಾಬ್  ಅವರು ಏಕೀಕರಣ ಹೋರಾಟದಲ್ಲಿ ಜೀವ ತೆತ್ತರು. ಈ ಜೀವ ಕನ್ನಡನಾಡಿನ ಜಾತ್ಯತೀತ ಮೌಲ್ಯದ ಒಂದು ಮಾದರಿಯಾಗಿ ಇಂದಿಗೂ ಸ್ಮರಣೀಯವಾಗಿದೆ.
ಹೀಗೆ ಕನ್ನಡ ಮತ್ತು ತೆಲುಗು ಕೇಂದ್ರಿತ ಏಕೀಕರಣ ಹೋರಾಟಗಳ ಫಲವಾಗಿ ಕೇಂದ್ರ ಸರ್ಕಾರವು  1953ರಲ್ಲಿ ಫಜಲ್ ಆಲಿ ಅವರ  ನೇತೃತ್ವದಲ್ಲಿ ರಾಜ್ಯ ಪುನರ್‍ವಿಂಗಡನಾ ಆಯೋಗವನ್ನು ರಚಿಸಿತು. ಇದೇ ವರ್ಷ, ಪೊಟ್ಟಿ ಶ್ರೀರಾಮುಲು ಅವರ ಹೋರಾಟ ಮತ್ತು ಮರಣದ ಫಲವೆಂಬಂತೆ ತೆಲುಗು ಪ್ರಧಾನ ಪ್ರಾಂತ್ಯವಾಗಿ `ಆಂದ್ರಪ್ರದೇಶ’ ರಚನೆಯಾಯಿತು. ಮುಂದೆ ಫಜಲ್ ಆಲಿ ಆಯೋಗದ ಶಿಫಾರಿಸಿನಂತೆ  ಭಾಷಾವಾರು ಪ್ರಾಂತ್ಯಗಳ ರಚನೆಯಾಗಿ 1.11.1956 ರಂದು `ವಿಶಾಲ ಮೈಸೂರು’ ಅಸ್ತಿತ್ವಕ್ಕೆ ಬಂದಿತು.  ಕನ್ನಡ ಮಾತು ಪ್ರಧಾನವಾದ ಕೇರಳದ ಕಾಸರಗೋಡು, ಹೊಸದುರ್ಗವನ್ನೂ ಒಳಗೊಂಡಂತೆ  ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶದಲ್ಲಿರುವ ಕನ್ನಡಪ್ರಧಾನ  ಪ್ರದೇಶಗಳನ್ನು  ಒಳಗೊಳ್ಳದೆ `ವಿಶಾಲ ಮೈಸೂರು’ ಎಂಬ ಕನ್ನಡದ ಬಹುಪಾಲು ಪ್ರದೇಶದ ಏಕೀಕೃತ ರಾಜ್ಯ ಅಸ್ತಿತ್ವಕ್ಕೆ ಬಂದಿತು. ಆದರೆ `ಕರ್ನಾಟಕ’ ಎಂದು ಹೆಸರಿಡಲು 1973ರವರೆಗೆ ಕಾಯಬೇಕಾಯಿತು. ಅದರಲ್ಲೂ `ಮೈಸೂರು’ ಹೆಸರಿನ ಪರವಾಗಿದ್ದ ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿ `ಕರ್ನಾಟಕ’   ಎಂದು ಹೆಸರಿಡಬೇಕಾಯಿತು. ಜನಾಭಿಪ್ರಾಯಕ್ಕೆ  ಮನ್ನಣೆಕೊಟ್ಟ ದೇವರಾಜ ಅರಸು  ತಮ್ಮ ಹಿಂದಿನ ಅಭಿಪ್ರಾಯವನ್ನು ಬದಿಗೊತ್ತಿ 1.11.1973 ರಂದು ಈ ‘ವಿಶಾಲ ಮೈಸೂರು’ ಬದಲು `ಕರ್ನಾಟಕ’ ಎಂದು ಹೆಸರು ಬದಲಾಯಿಸಿದ್ದು ಸಾಂಕೇತಿಕವಾಗಿ ಜನಾಭಿಪ್ರಾಯದ ವಿಜಯ. ಅರಸು ಅವರ ಪ್ರಜಾಸತಾತ್ಮಕ ನಿಲುವಿನ ಫಲ. ಅಂದು ಅರಸು ಅವರು ಕರ್ನಾಟಕದ ಜನಮಾನಸದ ಅಭಿನಂದನೆಗೆ ಪಾತ್ರರಾದರು. ಹಾಗೆ ನೋಡಿದರೆ ಕರ್ನಾಟಕದೊಳಗಿನ ವಿವಿಧ ಸಾಮಾಜಿಕ ಮತ್ತು ಭೌಗೋಳಿಕ ವಲಯಗಳನ್ನು ಒಳಗೊಳ್ಳುವಂತೆ ಪ್ರತಿನಿಧೀಕರಣದ ಪ್ರಕ್ರಿಯೆಗೆ ಕಾರಣರಾದ ಅರಸು  `ಸಾಮಾಜಿಕ ಏಕೀಕರಣ’ದ ರೂವಾರಿ ಎಂದರೂ ತಪ್ಪಾಗಲಾರದು. ಕರ್ನಾಟಕದ ವಿಧಾನ ಮಂಡಲದಲ್ಲಿ ವಿವಿಧ ಪ್ರದೇಶ, ವಿವಿಧ ಸಾಮಾಜಿಕ ಹಿನ್ನಲೆಯ ಸಂಕೇತಗಳು ಸಮಾವೇಶಗೊಳ್ಳುವಂತೆ ಮಾಡಿದ ಅರಸು ಅವರ `ಸಾಮಾಜಿಕ ಏಕೀಕರಣ’ದ                          ರಾಜಕಾರಣ ಅಸಾಧಾರಣ.
ಆದರೆ ಆಮೇಲೆ ಏನಾಯಿತು? ಭಾಷೆ ಮತ್ತು ಭೂಗೋಳವನ್ನು ಬೆಸೆದ ಏಕೀಕರಣವು ಮಾನಸಿಕ ಏಕೀಕರಣಕ್ಕೆ ಕಾರಣವಾಯಿತೆ? ಏಕೀಕರಣದ ವಿಸ್ತರಣೆಗಾಗಿ ಭೂಗೋಳ ಪ್ರಜ್ಞೆಯೇ ಪ್ರಧಾನವಾಯಿತೆ? ಸ್ವಲ್ಪಮಟ್ಟಿಗೆ ಹೌದು. ಆದ್ದರಿಂದಲೇ ಕರ್ನಾಟಕದ ವಿಸ್ತಾರವನ್ನು ಕುರಿತು ಮತ್ತೆ ಮತ್ತೆ  ಮಾತನಾಡುವವರು ಭೂಗೋಳ ಪ್ರಜ್ಞೆಯ ಪರಿಧಿಯಲ್ಲೇ ಉಳಿದಿದ್ದಾರೆ. ನಿಜ; ಕಾವೇರಿಯಿಂದ ಗೋದಾವರಿವರೆಗೆ ನಮ್ಮ ಅಂದಿನ ನಾಡು ಇತ್ತು ಎಂದುಕೊಳ್ಳೋಣ. ಅಷ್ಟೇಕೆ ಅಚ್ಚಕನ್ನಡ ರಾಜವಂಶವೆಂಬ ಕೀರ್ತಿಗೆ ಭಾಜನರಾದ ಮತ್ತು 215 ವರ್ಷಗಳವರೆಗೆ  ಆಳಿದ  ಕದಂಬರ ಸಾಮ್ರಾಜ್ಯವು ಮೃಗೇಶ ವರ್ಮನ ಕಾಲದಲ್ಲಿ ಉತ್ತರದ ನರ್ಮದಾ ನದಿಯವರೆಗೆ ವಿಸ್ತಾರಗೊಂಡಿತ್ತು. ಬಾದಾಮಿ ಚಾಲುಕ್ಯರ ಸಾಮ್ರಾಜ್ಯದಲ್ಲಿ ಅಜಂತ, ಎಲ್ಲೋರ, ನಾಸಿಕ್, ಓರಂಗಲ್ ಮುಂತಾದ ಪ್ರದೇಶಗಳೂ ಇದ್ದವು. ರಾಷ್ಟ್ರಕೂಟರ ಸಾಮ್ರಾಜ್ಯದಲ್ಲಿಯೂ ಅಜಂತ, ಎಲ್ಲೋರ, ಇದ್ದವು. ಕಲ್ಯಾಣಿ ಚಾಲುಕ್ಯರ ಸಾಮ್ರಾಜ್ಯದಲ್ಲಿ ಓರಂಗಲ್ಲು, ಪಂಡರಪುರ, ದೇವಗಿರಿ, ನವಸಾರಿಕ ಮುಂತಾದ ಪ್ರದೇಶಗಳಿದ್ದವು. ಹೊಯ್ಸಳರ ಸಾಮ್ರಾಜ್ಯದಲ್ಲಿ ಕಂಚಿ, ಕಣ್ಣಾನೂರುಗಳಿದ್ದವು. ವಿಜಯನಗರ ಸಾಮ್ರಾಜ್ಯದಲ್ಲಿ ತೇಡಪತ್ರಿ, ಲೇಪಾಕ್ಷಿ, ತಿರುಪತಿ, ವೆಲ್ಲೂರು, ಮಧುರೆ, ಪಾಂಡಿಚೆರಿ ಮುಂತಾದ ಪ್ರದೇಶಗಳು ಇದ್ದವು. ಹೀಗೆ ವಿವಿಧ ಸಾಮ್ರಾಜ್ಯಗಳಲ್ಲಿದ್ದ ಪ್ರದೇಶಗಳಲ್ಲಿ ಕನ್ನಡವೂ ಇತ್ತು.  ಆದರೆ ಎಲ್ಲ ಪ್ರದೇಶಗಳಲ್ಲೂ  ಕನ್ನಡವಿರಲಿಲ್ಲ. ಇದರರ್ಥ ಏನು? ಈ ಪ್ರದೇಶಗಳೆಲ್ಲ ಕನ್ನಡ ಪ್ರದೇಶಗಳಲ್ಲ; ಕನ್ನಡ ಬಲ್ಲ ರಾಜರ ಪ್ರದೇಶಗಳು. ಇದಕ್ಕೆ ಉತ್ತಮ ಉದಾಹರಣೆಯೆಂದರೆ ವಿಜಯನಗರ ಸಾಮ್ರಾಜ್ಯ ಮತ್ತು  ಶ್ರೀಕೃಷ್ಣದೇವರಾಯ. ಆಂಧ್ರಪ್ರದೇಶದವರು ಶ್ರೀಕೃಷ್ಣದೇವರಾಯನನ್ನು ತಮ್ಮವನೆಂದು ತಿಳಿದಿದ್ದಾರೆ. ನಾವು ಕನ್ನಡಿಗರು ನಮ್ಮವನೆಂದು ತಿಳಿದಿದ್ದೇವೆ. ಆಂಧ್ರದಲ್ಲಿ ನಮಗಿಂತ ಮೊದಲೇ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯ ಸ್ಥಾಪನೆಯಾಗುತ್ತದೆ. ಶ್ರೀಕೃಷ್ಣ ದೇವರಾಯ ತೆಲುಗು ಸಿನಿಮಾ ತಯಾರಾಗುತ್ತದೆ.  ಆನಂತರ ನಮ್ಮಲ್ಲಿ ಶ್ರೀಕೃಷ್ಣದೇವರಾಯ ಸಿನಿಮಾ ನಿರ್ಮಾಣ; ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಸ್ಥಾಪನೆ. ಇದರರ್ಥ ಏನು? ಶ್ರೀಕೃಷ್ಣದೇವರಾಯನ ಸಾಮ್ರಾಜ್ಯ ಪೂರ್ಣ ಕನ್ನಡ ಸಾಮ್ರಾಜ್ಯವಲ್ಲ. ಅಷ್ಟೇಕೆ, ಯಾವುದೇ ರಾಜರ ಸಾಮ್ರಾಜ್ಯಗಳು ಒಂದೇ ಭಾಷೆಯ ರಾಜ್ಯಗಳಲ್ಲ. ಆದ್ದರಿಂದ ಕನ್ನಡ ರಾಜವಂಶಗಳ ಸಾಮ್ರಾಜ್ಯಗಳನ್ನು ಇಡಿಯಾಗಿ                    ಕನ್ನಡ ಪ್ರದೇಶಗಳೆಂದು ಕರೆಯುವುದು ಚಾರಿತ್ರಿಕವಾಗಿ ಸರಿಯಲ್ಲ.
ಸಮಸ್ಯೆ  ಇರುವುದೇ ಇಲ್ಲಿ. ಭೂಗೋಳಪ್ರಜ್ಞೆ ಮತ್ತು ಚರಿತ್ರೆಯ ಪ್ರಜ್ಞೆ ಒಂದಾಗಿ ಬೆಸೆದ  ಕನ್ನಡ ಪ್ರಜ್ಞೆಯ ಕೊರತೆಯಿಂದ ಸಾಮ್ರಾಜ್ಯಪ್ರಜ್ಞೆಯೇ ಪ್ರಧಾನವಾಗಿಬಿಡುತ್ತದೆ. ಚರಿತ್ರೆಯ ಪ್ರಜ್ಞೆಯೆಂಬುದು ಸಹ ಗತಕಾಲದ ಕನವರಿಕೆಯಲ್ಲ.                                ಇಲ್ಲಿ ಡಿ.ಡಿ. ಕೊಸಾಂಬಿಯವರ ವ್ಯಾಖ್ಯಾನವನ್ನು ಉಲ್ಲೇಖಿಸಬೇಕು: “ಚರಿತ್ರೆಕಾರನ ಕೆಲಸ ಕೇವಲ ಭೂತಕಾಲವನ್ನು ಪ್ರೀತಿಸುವುದು ಅಥವಾ ಭೂತ ಕಾಲದಿಂದ ದೂರವಾಗುವುದಲ್ಲ. ವರ್ತಮಾನವನ್ನು ಅರ್ಥಮಾಡಿಕೊಳ್ಳಲು ಭೂತಕಾಲವನ್ನು ಕೀಲಿಕೈ ಎಂದು ತಿಳಿಯಬೇಕು. ಭೂತಕಾಲದ ಬೆಳಕಿನಲ್ಲಿ ವರ್ತಮಾನವನ್ನು ಅರಿಯುವುದೆಂದರೆ, ವರ್ತಮಾನದ ಬೆಳಕಿನಲ್ಲಿ, ಭೂತಕಾಲವನ್ನು ಸಹ ಅರಿಯುವುದು ಎಂದರ್ಥ”
ಭಾಷಾಭಿಮಾನಕ್ಕೆ ಭೂತಕಾಲ ಮತ್ತು ವರ್ತಮಾನಗಳ ಉಚಿತಾನುಸಂಧಾನ ಮುಖ್ಯ. ಭೂತದಲ್ಲೇ ಹೂತು ಹೋಗುವುದು ಕೇವಲ ಕನವರಿಕೆಯಾಗುತ್ತದೆ. ವರ್ತಮಾನವೇ ಸರ್ವಸ್ವ ಎಂದುಕೊಂಡರೆ ಪರಂಪರೆಯ ಪ್ರಜ್ಞೆ ಪತನಗೊಳ್ಳುತ್ತದೆ.                     ಒಂದರಿಂದ ಇನ್ನೊಂದನ್ನು ಅರಿಯುವ ಅರ್ಥಪೂರ್ಣತೆ ಮುಖ್ಯ.
ಆದ್ದರಿಂದ, ನಾವು ಅರ್ಥಮಾಡಿಕೊಳ್ಳಬೇಕು: ಭಾಷೆ ಮತ್ತು ಭೂಗೋಳದ ಸಂಬಂಧವಷ್ಟೇ ಕನ್ನಡಾಭಿಮಾನವಲ್ಲ. ಭೂಗೋಳ ಮಿತಿಯ ಚಿಂತನೆಯೊಂದೇ ಕರ್ನಾಟಕದ ಮನಸ್ಸನ್ನು ಒಂದುಗೂಡಿಸುವ ಅಂತಿಮ ಸಾಧನವಾಗುವುದಿಲ್ಲ. ಸಾಮಾಜಿಕ-ಆರ್ಥಿಕ  ಸಮಾನತೆಯ ಆಧಾರದಲ್ಲಿ ಅಭಿವೃದ್ಧಿಯ ಸಮತೋಲನವನ್ನು ಸಾಧಿಸದಿದ್ದರೆ ಕರ್ನಾಟಕದ ಒಳಗೆ ಒಡಕು ಹುಟ್ಟುತ್ತದೆ. ಹುಟ್ಟುತ್ತದೆ ಅನ್ನುವುದಾದರೂ ಏಕೆ? ಹುಟ್ಟುತ್ತಿದೆ. ಅಭಿವೃದ್ಧಿಯಲ್ಲಿ ಪ್ರಾದೇಶಿಕ ಅಸಮತೋಲನದ ಅಸಮಾಧಾನ ಪ್ರಕಟಗೊಳ್ಳುತ್ತಿದೆ. ನಿಜ; ದಕ್ಷಿಣ ಕರ್ನಾಟಕದ ಕೆಲವು ಪ್ರದೇಶಗಳೂ ಹಿಂದುಳಿದಿವೆ. ಆದರೆ ಮೈಸೂರು ರಾಜ್ಯಕ್ಕೆ ಸೇರಿದ  ಹೊಸ ಪ್ರದೇಶಗಳು ಹೆಚ್ಚು ಹಿಂದುಳಿದಿವೆ. ಕೇವಲ ಆರ್ಥಿಕ ಅಭಿವೃದ್ಧಿಯ  ಅಸಮತೋಲನವಷ್ಟೇ ಅಲ್ಲ, ಸಾಂಸ್ಕøತಿಕ ಪ್ರಾತಿನಿಧ್ಯದ ಪರಕೀಯತೆಯೂ  ಇವರನ್ನು ಕಾಡಿಸುತ್ತಿದೆ.  ರಾಜಧಾನಿ ಕೇಂದ್ರಿತ ನೋಟದಿಂದ ಸಿಗುವ ಸಾಂಕೇತಿಕ ಪ್ರಾತಿನಿಧ್ಯವು ಸಾಂಸ್ಕøತಿಕ ಪರಕೀಯತೆಯನ್ನು ಸಲೀಸಾಗಿ ಹೋಗಲಾಡಿಸಲಾರದು. ಕರ್ನಾಟಕದ ಸಮಸ್ತ ಭೂಗೋಳದೊಳಗೆ ಇರುವ ಜನರ ಸಾಂಸ್ಕøತಿಕ ವೈಶಿಷ್ಟ್ಯಗಳನ್ನು ಉಳಿಸಿ ಬೆಳೆಸಬೇಕಾದ್ದು ಒಂದು ಹೊಣೆಗಾರಿಕೆಯಾದರೆ, ಏಕೀಕರಣದ ಫಲವಾಗಿ ಜೊತೆಗೂಡಿದ ಪ್ರದೇಶಗಳ ಪ್ರತಿಭಾವಂತರಿಗೆ ಪ್ರತೀಕಾತ್ಮಕ ಪ್ರಾತಿನಿಧ್ಯ ನೀಡುವ ಹೊಣೆಗಾರಿಕೆಯೂ ಆಡಳಿತಗಾರರ ಮೇಲಿದೆ; ಸಾಂಸ್ಕøತಿಕ ಸಂಘಸಂಸ್ಥೆಗಳ  ಜವಾಬ್ದಾರಿಯೂ ಆಗಿದೆ. ಅಷ್ಟೇಕೆ ಸಾಮಾಜಿಕವಾಗಿ ತುಳಿತಕ್ಕೊಳಗಾದವರನ್ನು ಪರಕೀಯತೆಯಿಂದ                      ಪಾರು ಮಾಡಬೇಕಾಗಿದೆ.  ಸಮಗ್ರ ಸಾಮಾಜಿಕ, ಆರ್ಥಿಕ, ಸಾಂಸ್ಕøತಿಕ ದೃಷ್ಟಿ ಕೋನದ ದೂರಗಾಮಿಚಿಂತನೆ ಮತ್ತು ಬದ್ಧಕ್ರಿಯಾಶೀಲತೆಯಿಂದ ಮಾತ್ರ ಇದು ಸಾಧ್ಯ. ಇಲ್ಲದಿದ್ದರೆ, ಬೇಕೊ ಬೇಡವೊ, ಪ್ರತ್ಯೇಕ ರಾಜ್ಯದ  ಬೇಡಿಕೆ ಇಡುತ್ತಿರುವವರ ದನಿ ಮುಂದೊಂದು ದಿನ ಸಮೂಹ ಸನ್ನಿಯಾದರೆ ಅಚ್ಚರಿಯಿಲ್ಲ.
ಏಕೀಕರಣದಿಂದ  ಪ್ರತ್ಯೇಕೀಕರಣದ ಕಿರುದನಿಯತ್ತ ವಾಲುತ್ತಿರುವ ನಮ್ಮ ಸಂದರ್ಭದಲ್ಲಿ ಆತ್ಮಾವಲೋಕನ ಅಗತ್ಯ  ಎಂದು ನಾನು ಭಾವಿಸುತ್ತೇನೆ.   ಪ್ರತ್ಯೇಕ ರಾಜ್ಯದ ಬೇಡಿಕೆ ಇಡುತ್ತಿರುವವರು ಪ್ರತ್ಯೇಕತೆಯೊಂದೇ  ಪರಿಹಾರವೇ ಎಂದು ತಮ್ಮೊಳಗನ್ನು ಕೇಳಿಕೊಳ್ಳಬೇಕು. ಪ್ರತ್ಯೇಕ ರಾಜ್ಯವೆನ್ನುವುದು ಭೂಗೋಳ ವಿಭಜನೆ ಮತ್ತು ಅಧಿಕಾರ ಹಂಚಿಕೆಗೆ ನೆರವಾಗಬಹುದು. ಆದರೆ ಒಂದು ರಾಜ್ಯದ ಅಭಿವೃದ್ಧಿಗೆ ಅದಷ್ಟೇ ಸಾಕೆ? ನಿರ್ದಿಷ್ಟ ಭೂಗೋಳದೊಳಗೆ ಇರುವ ಸಾಮಾಜಿಕ ಪ್ರತ್ಯೇಕತೆ ಮತ್ತು ಸಾಂಸ್ಕøತಿಕ ಪ್ರತ್ಯೇಕತೆಯು ಪ್ರತ್ಯೇಕ ರಾಜ್ಯ ರಚನೆಯಿಂದ ಪರಿಹಾರವಾಗುತ್ತದೆಯೆ? ಖಂಡಿತ ಇಲ್ಲ. ಜಾತಿ, ವರ್ಣ,                      ಲಿಂಗತ್ವ ಅಸಮಾನತೆಗಳನ್ನು ಆಧಾರಿಸಿದ ಸಾಮಾಜಿಕ ಪ್ರತ್ಯೇಕತೆಗೆ ಸಾಮಾಜಿಕ ನ್ಯಾಯದ ರಾಜ್ಯಬೇಕು; ಪ್ರತ್ಯೇಕರಾಜ್ಯವಲ್ಲ. ಸಾಂಸ್ಕøತಿಕ ಪ್ರತ್ಯೇಕತೆಯನ್ನು ಹೋಗಲಾಡಿಸಲು ಬಹುತ್ವ ಬದ್ಧ ಚಿಂತನೆ ಮತ್ತು ಕ್ರಿಯೆ ಬೇಕು. ನಾವು ತಿಳಿಯಬೇಕು: ಸಾಮಾಜಿಕ ಪ್ರತ್ಯೇಕತೆ ಮತ್ತು ಸಾಂಸ್ಕøತಿಕ ಪ್ರತ್ಯೇಕತೆಯನ್ನುವುದು ಕೇವಲ ಪ್ರತ್ಯೇಕತೆಯಲ್ಲ. ಅದು ಪರಕೀಯತೆ. ಕನ್ನಡ ಭಾಷಾ  ಭೂಗೋಳದಲ್ಲೇ ಅನುಭವಿಸುವ ಪರಕೀಯತೆ. ಈ ಪರಕೀಯತೆ ಏಕೀಕೃತ ಅಖಂಡ ಕರ್ನಾಟಕದಲ್ಲಿಯೇ ಕೊನೆಗಾಣಬೇಕು.                            ಪ್ರತ್ಯೇಕ ರಾಜ್ಯಬೇಡಿಕೆಯವರಿಗೆ ಅಭಿವೃದ್ಧಿಯ ಅಸಮತೋಲನ ಮತ್ತು ಅಧಿಕಾರ ಮುಖ್ಯವಾದಂತೆ ಸಾಮಾಜಿಕ ಮತ್ತು ಸಾಂಸ್ಕøತಿಕ ಸಮಸ್ಯೆ ಮುಖ್ಯವಾದಂತೆ ಕಾಣಿಸುತ್ತಿಲ್ಲ.  ಆದ್ದರಿಂದ ಪ್ರತ್ಯೇಕ ರಾಜ್ಯ ಬೇಡಿಕೆಯವರಲ್ಲಿ ನನ್ನದೊಂದು ಬೇಡಿಕೆ. ನಾವು ಒಂದಾಗಿ ಸಮಸ್ಯೆಗಳನ್ನು ಬಿಡಿಸೋಣ. ಸವಾಲುಗಳನ್ನು ಒಂದಾಗಿ  ಎದುರಿಸೋಣ. ಭಾವನಾತ್ಮಕವಾಗಿ ಮಾತ್ರವಲ್ಲ. ಕ್ರಿಯಾತ್ಮಕವಾಗಿ ಕೆಲಸ ಮಾಡೋಣ. ಕರ್ನಾಟಕದ ಯಾವುದೇ ಪ್ರದೇಶಕ್ಕೆ ಅನ್ಯಾಯವಾದರೂ ಒಂದಾಗಿ  ಪ್ರತಿಭಟಿಸೋಣ. ಒಡೆದು ಹೋಗುವುದಕ್ಕೆ ನಾವು ಒಂದಾಗಲಿಲ್ಲ ಎಂಬುದನ್ನು ತೋರಿಸಿಕೊಡೋಣ. ಇಂಥದೊಂದು ಕ್ರಿಯೆಗೆ ಕರ್ನಾಟಕದ                ಎಲ್ಲ ಪ್ರದೇಶಗಳ ನೋಟವೇ ಬದಲಾಗಬೇಕು. ಅಪನಂಬಿಕೆಯ ವಾತಾವರಣ ಹೋಗಬೇಕು. ಈ ನಿಟ್ಟಿನಲ್ಲಿ ಆಳುವ  ಸರ್ಕಾರಗಳ ಜವಾಬ್ದಾರಿಯೂ ದೊಡ್ಡದಾಗಬೇಕು. ಎಲ್ಲ ಪ್ರದೇಶದ ಜನಪ್ರತಿನಿಧಿಗಳ ದನಿ ಗಟ್ಟಿಯಾಗಬೇಕು.

ಈವರೆಗೆ ನಡೆನಡೆದ ಕನ್ನಡ ಸಾಹಿತ್ಯ ಸಮ್ಮೇಳನಗಳು

��ಕನ್ನಡ ಸಾಹಿತ್ಯ ಸಮ್ಮೇಳನಗಳು��


ಕ್ರಮಸಂಖ್ಯೆ ವರ್ಷ ಸ್ಥಳ
೧ ೧೯೧೫ ಬೆಂಗಳೂರು ಎಚ್.ವಿ.ನಂಜುಂಡಯ್ಯ
೨ ೧೯೧೬ ಬೆಂಗಳೂರು ಎಚ್.ವಿ.ನಂಜುಂಡಯ್ಯ
೩ ೧೯೧೭ ಮೈಸೂರುಎಚ್.ವಿ.ನಂಜುಂಡಯ್ಯ
೪ ೧೯೧೮ ಧಾರವಾಡ ಆರ್.ನರಸಿಂಹಾಚಾರ್
೫ ೧೯೧೯ ಹಾಸನ ಕರ್ಪೂರ ಶ್ರೀನಿವಾಸರಾವ್
೬ ೧೯೨೦ ಹೊಸಪೇಟೆ ರೊದ್ದ ಶ್ರೀನಿವಾಸರಾವ
೭ ೧೯೨೧ ಚಿಕ್ಕಮಗಳೂರು ಕೆ.ಪಿ.ಪುಟ್ಟಣ್ಣ ಶೆಟ್ಟಿ
೮ ೧೯೨೨ ದಾವಣಗೆರೆ ಎಂ.ವೆಂಕಟಕೃಷ್ಣಯ್ಯ
೯ 1೯೨೩ ಬಿಜಾಪುರ ಸಿದ್ಧಾಂತಿ ಶಿವಶಂಕರಶಾಸ್ತ್ರಿ
೧೦ ೧೯೨೪ ಕೋಲಾರ ಹೊಸಕೋಟೆ ಕೃಷ್ಣಶಾಸ್ತ್ರಿ
೧೧ ೧೯೨೫ ಬೆಳಗಾವಿ ಬೆನಗಲ್ ರಾಮರಾವ್
೧೨ ೧೯೨೬ ಬಳ್ಳಾರಿ ಫ.ಗು.ಹಳಕಟ್ಟಿ
೧೩ ೧೯೨೭ ಮಂಗಳೂರು ಆರ್.ತಾತಾಚಾರ್ಯ
೧೪ ೧೯೨೮ ಕಲಬುರ್ಗಿಬಿ ಎಂ ಶ್ರೀ
೧೫ ೧೯೨೯ ಬೆಳಗಾವಿ ಮಾಸ್ತಿ ವೆಂಕಟೇಶಅಯ್ಯಂಗಾರ್
೧೬ ೧೯೩೦ ಮೈಸೂರು ಆಲೂರು ವೆಂಕಟರಾಯರು
೧೭ ೧೯೩೧ ಕಾರವಾರ ಮುಳಿಯ ತಿಮ್ಮಪ್ಪಯ್ಯ
೧೮ ೧೯೩೨ ಮಡಿಕೇರಿಡಿ ವಿ ಜಿ
೧೯ ೧೯೩೩ ಹುಬ್ಬಳ್ಳಿ ವೈ.ನಾಗೇಶ ಶಾಸ್ತ್ರಿ
೨೦ ೧೯೩೪ ರಾಯಚೂರು ಪಂಜೆ ಮಂಗೇಶರಾಯರು
೨೧ ೧೯೩೫ ಮುಂಬಯಿ ಎನ್.ಎಸ್.ಸುಬ್ಬರಾವ್
೨೨ ೧೯೩೭ ಜಮಖಂಡಿ ಬೆಳ್ಳಾವೆವೆಂಕಟನಾರಣಪ್ಪ
೨೩ ೧೯೩೮ ಬಳ್ಳಾರಿ ರಂಗನಾಥ ದಿವಾಕರ
೨೪ ೧೯೩೯ ಬೆಳಗಾವಿ ಮುದವೀಡುಕೃಷ್ಣರಾಯರು
೨೫ ೧೯೪೦ ಧಾರವಾಡ ವೈ.ಚಂದ್ರಶೇಖರ ಶಾಸ್ತ್ರಿ
೨೬ 1೯೪೧ ಹೈದರಾಬಾದ್ ಎ.ಆರ್.ಕೃಷ್ಣಶಾಸ್ತ್ರಿ
೨೭ ೧೯೪೩ ಶಿವಮೊಗ್ಗ ದ.ರಾ.ಬೇಂದ್ರೆ
೨೮ ೧೯೪೪ ರಬಕವಿ ಎಸ್.ಎಸ್.ಬಸವನಾಳ
೨೯ ೧೯೪೫ ಮದರಾಸು ಟಿ ಪಿ ಕೈಲಾಸಂ
೩೦ ೧೯೪೭ ಹರಪನಹಳ್ಳಿ ಸಿ.ಕೆ.ವೆಂಕಟರಾಮಯ್ಯ
೩೧ ೧೯೪೮ ಕಾಸರಗೋಡುತಿ.ತಾ.ಶರ್ಮ
೩೨ ೧೯೪೯ ಕಲಬುರ್ಗಿ ಉತ್ತಂಗಿ ಚನ್ನಪ್ಪ
೩೩ ೧೯೫೦ ಸೊಲ್ಲಾಪುರ ಎಮ್.ಆರ್.ಶ್ರೀನಿವಾಸಮೂರ್ತಿ
೩೪ ೧೯೫೧ ಮುಂಬಯಿ ಗೋವಿಂದ ಪೈ
೩೫ ೧೯೫೨ ಬೇಲೂರು ಎಸ್.ಸಿ.ನಂದೀಮಠ
೩೬ ೧೯೫೪ ಕುಮಟಾ ವಿ.ಸೀತಾರಾಮಯ್ಯ
೩೭ ೧೯೫೫ ಮೈಸೂರು ಶಿವರಾಮ ಕಾರಂತ
೩೮ ೧೯೫೬ ರಾಯಚೂರು ಶ್ರೀರಂಗ
೩೯ ೧೯೫೭ ಧಾರವಾಡ ಕುವೆಂಪು
೪೦ ೧೯೫೮ ಬಳ್ಳಾರಿ ವಿ.ಕೆ.ಗೋಕಾಕ
41 ೧೯೫೯ ಬೀದರ ಡಿ.ಎಲ್.ನರಸಿಂಹಾಚಾರ್
೪೨ ೧೯೬೦ ಮಣಿಪಾಲ ಅ.ನ. ಕೃಷ್ಣರಾಯ೪
೩೧೯೬೧ ಗದಗ ಕೆ.ಜಿ.ಕುಂದಣಗಾರ
೪೪ ೧೯೬೩ ಸಿದ್ದಗಂಗಾ ರಂ.ಶ್ರೀ.ಮುಗಳಿ
೪೫ ೧೯೬೫ಕಾರವಾರಕಡೆಂಗೋಡ್ಲು ಶಂಕರಭಟ್ಟ
೪೬ ೧೯೬೭ ಶ್ರವಣಬೆಳಗೊಳ ಆ.ನೇ.ಉಪಾಧ್ಯೆ
೪೭ ೧೯೭೦ ಬೆಂಗಳೂರು ದೇ.ಜವರೆಗೌಡ
೪೮ ೧೯೭೪ ಮಂಡ್ಯ ಜಯದೇವಿತಾಯಿ ಲಿಗಾಡೆ
೪೯ ೧೯೭೬ ಶಿವಮೊಗ್ಗ ಎಸ್.ವಿ.ರಂಗಣ್ಣ
೫೦ ೧೯೭೮ ದೆಹಲಿ ಜಿ.ಪಿ.ರಾಜರತ್ನಂ
೫೧ ೧೯೭೯ ಧರ್ಮಸ್ಥಳ ಗೋಪಾಲಕೃಷ್ಣ ಅಡಿಗ
೫೨ ೧೯೮೦ ಬೆಳಗಾವಿ ಬಸವರಾಜ ಕಟ್ಟೀಮನಿ
೫೩ ೧೯೮೧ ಚಿಕ್ಕಮಗಳೂರು ಪು.ತಿ.ನರಸಿಂಹಾಚಾರ್
೫೪ ೧೯೮೧ ಮಡಿಕೇರಿ ಶಂ.ಬಾ.ಜೋಶಿ
೫೫ ೧೯೮೨ ಶಿರಸಿ ಗೊರೂರು ರಾಮಸ್ವಾಮಿಐಯಂಗಾರ್
೫೬ ೧೯೮೪ ಕೈವಾರ ಎ.ಎನ್.ಮೂರ್ತಿ ರಾವ್
೫೭ ೧೯೮೫ ಬೀದರ್. ಹಾ.ಮಾ.ನಾಯಕ
೫೮ ೧೯೮೭ ಕಲಬುರ್ಗಿ ಸಿದ್ದಯ್ಯ ಪುರಾಣಿಕ
೫೯ ೧೯೯೦ ಹುಬ್ಬಳ್ಳಿ ಆರ್.ಸಿ.ಹಿರೇಮಠ
೬೦ ೧೯೯೧ ಮೈಸೂರು ಕೆ.ಎಸ್. ನರಸಿಂಹಸ್ವಾಮಿ
೬೧ ೧೯೯೨ ದಾವಣಗೆರೆ ಜಿ.ಎಸ್.ಶಿವರುದ್ರಪ್ಪ
೬೨ ೧೯೯೩ ಕೊಪ್ಪ್ಪಳ ಸಿಂಪಿ ಲಿಂಗಣ್ಣ
೬೩ ೧೯೯೪ ಮಂಡ್ಯ ಚದುರಂಗ
೬೫ ೧೯೯೬ ಹಾಸನ ಚನ್ನವೀರ ಕಣವಿ
೬೬ ೧೯೯೭ ಮಂಗಳೂರು ಕಯ್ಯಾರ ಕಿಞ್ಞಣ್ಣ ರೈ
೬೭ ೧೯೯೯ ಕನಕಪುರ ಎಸ್.ಎಲ್.ಭೈರಪ್ಪ
೬೮ ೨೦೦೦ ಬಾಗಲಕೋಟೆ ಶಾಂತಾದೇವಿ ಮಾಳವಾಡ
೬೯ ೨೦೦೨ ತುಮಕೂರು ಯು.ಆರ್. ಅನಂತಮೂರ್ತಿ
೭೦ ೨೦೦೩ ಮೂಡುಬಿದಿರೆ ಕಮಲಾ ಹಂಪನಾ
೭೨ ೨೦೦೬ ಬೀದರ್ ಶಾಂತರಸ ಹೆಂಬೆರಳು
೭೩ ೨೦೦೭ ಶಿವಮೊಗ್ಗ ನಿಸಾರ್ ಅಹಮ್ಮದ್
೭೪ ೨೦೦೮ ಉಡುಪಿ ಎಲ್. ಎಸ್. ಶೇಷಗಿರಿ ರಾವ್
೭೫ ೨೦೦೯ ಚಿತ್ರದುರ್ಗ ಎಲ್. ಬಸವರಾಜು
೭೬ ೨೦೧೦ ಗದಗ ಗೀತಾ ನಾಗಭೂಷಣ
೭೭ ೨೦೧೧ ಬೆಂಗಳೂರು ಜಿ. ವೆಂಕಟಸುಬ್ಬಯ್ಯ
೭೮ ೨೦೧೨ ಗಂಗಾವತಿ ಸಿ.ಪಿ ಕೃಷ್ಣಕುಮಾರ್
೭೯ ೨೦೧೩ ವಿಜಾಪುರ ಕೋ.ಚನ್ನಬಸಪ್ಪ
೮೦ ೨೦೧೪ ಕೊಡಗು ನಾ ಡಿಸೋಜ
೮೧ ೨೦೧೫ ಶ್ರವಣಬೆಳಗೊಳ ಡಾ. ಸಿದ್ದಲಿಂಗಯ್
೮೨ ೨೦೧೬ ರಾಯಚೂರು ಡಾ.ಬರಗೂರು ರಾಮಚಂದ್ರಪ್ಪ.
ಡಿಸೆಂಬರ್ ೦೨,೦೩,೦೪ ರಂದು ನಡೆದಿದೆ.

Tuesday 22 November 2016

ಬಸ್ ನಿಲ್ದಾಣ ಗಳ ಪೋನ್ ನಂಬರ್ ನಿಮಗಾಗಿ

ನೀವು ಕರ್ನಾಟಕದ ಯಾವುದೇ ಊರುಗಳಿಗೆ ಹೋಗ ಬೇಕಾದಲ್ಲಿ ಸರಕಾರಿ ಬಸ್ ನಿಲ್ದಾಣಗಳ ಸಂಪರ್ಕ ಸಂಖ್ಯೆಗಳನ್ನು ಬಳಸಿ ಯಾವ ಸಮಯಕ್ಕೆ ಬಸ್ ಹೊರಡುವುದು ಎಂದು ತಿಳಿಯುವ ಬಗ್ಗೆ ಒಂದು ಮಾಹಿತಿ:

1 ಬೆಂಗಳೂರು ಕೆಂಪೇಗೌಡ ಬಸ್ ನಿಲ್ದಾಣ 7760990562
2 ಬೆಂಗಳೂರು ಮೈಸೂರು ರಸ್ತೆ ಬಸ್ ನಿಲ್ದಾಣ  7760990530
3 ಬೆಂಗಳೂರು ಶಾಂತಿನಗರ ಬಸ್ ನಿಲ್ದಾಣ  7760990531
4 ಭದ್ರಾವತಿ ಬಸ್ ನಿಲ್ದಾಣ 7760973105
5 ಚಿಕ್ಕಮಗಳೂರು ಬಸ್ ನಿಲ್ದಾಣ 7760990419
6 ಚಿತ್ರದುರ್ಗ ಬಸ್ ನಿಲ್ದಾಣ 8194222431, 8194220201
7 ದಾವಣಗೆರೆ ಬಸ್ ನಿಲ್ದಾಣ 7760973101
8 ಧರ್ಮಸ್ಥಳ ಬಸ್ ನಿಲ್ದಾಣ  7760106655
9 ಹಾಸನ ಬಸ್ ನಿಲ್ದಾಣ 7760990520
10 ಕೋಲಾರ ಬಸ್ ನಿಲ್ದಾಣ 7760990611
11 ಕುಂದಾಪುರ ಬಸ್ ನಿಲ್ದಾಣ 7760973162
12 ಮಂಡ್ಯ ಬಸ್ ನಿಲ್ದಾಣ 7760973058
13 ಮಂಗಳೂರು ಬಸ್ ನಿಲ್ದಾಣ 7760990720
14 ಮಡಿಕೇರಿ ಬಸ್ ನಿಲ್ದಾಣ 7760107788
15 ಮೈಸೂರು ಬಸ್ ನಿಲ್ದಾಣ 8212424995, 7760990821
16 ಪುತ್ತೂರು ಬಸ್ ನಿಲ್ದಾಣ  7760973152
17 ಸಾಗರ ಬಸ್ ನಿಲ್ದಾಣ 9916760327
18 ಶಿವಮೊಗ್ಗ ಬಸ್ ನಿಲ್ದಾಣ 9972288421
19 ತುಮಕೂರು ಬಸ್ ನಿಲ್ದಾಣ 9741495772
20 ಉಡುಪಿ ಬಸ್ ನಿಲ್ದಾಣ 9663266400
21 ಅಪ್ಝಲ್ ಪುರ ಬಸ್ ನಿಲ್ದಾಣ 7760973268
22 ಆಳಂದ ಬಸ್ ನಿಲ್ದಾಣ 7760973270
23 ಬಸವ ಕಲ್ಯಾಣ ಬಸ್ ನಿಲ್ದಾಣ 7760973310
24 ಬಸವನ ಬಾಗೇವಾಡಿ ಬಸ್ ನಿಲ್ದಾಣ 7760973294
25 ಬಳ್ಳಾರಿ ಹೊಸ ಬಸ್ ನಿಲ್ದಾಣ 7760973328
26 ಬಳ್ಳಾರಿ ಹಳೆ ಬಸ್ ನಿಲ್ದಾಣ 7760973329
27 ಭಾಲ್ಕಿ ಬಸ್ ನಿಲ್ದಾಣ 7760973311
28 ಬೀದರ್ ಬಸ್ ನಿಲ್ದಾಣ 7760973308
29 ಬಿಜಾಪುರ ಬಸ್ ನಿಲ್ದಾಣ 7760973278
30 ಚಿಂಚೋಳಿ ಬಸ್ ನಿಲ್ದಾಣ 7760973271
31 ಚಿತ್ತಾಪುರ ಬಸ್ ನಿಲ್ದಾಣ 7760973272
32 ದೇವದುರ್ಗ ಬಸ್ ನಿಲ್ದಾಣ 7760973303
33 ಗಂಗಾವತಿ ಬಸ್ ನಿಲ್ದಾಣ 7760973357
34 ಗುಲ್ಬರ್ಗಾ ಬಸ್ ನಿಲ್ದಾಣ 7760973267
35 ಹೊಸಪೇಟೆ ಬಸ್ ನಿಲ್ದಾಣ 7760973317
36 ಹುಮ್ನಾಬಾದ್ ಬಸ್ ನಿಲ್ದಾಣ 7760973309
37 ಇಂಡಿ ಬಸ್ ನಿಲ್ದಾಣ 7760973285
38 ಜೇವರ್ಗಿ ಬಸ್ ನಿಲ್ದಾಣ 7760973269
39 ಕೊಪ್ಪಳ ಬಸ್ ನಿಲ್ದಾಣ 7760973345
40 ಕೂಡ್ಲಿಗಿ ಬಸ್ ನಿಲ್ದಾಣ 7760973320
41 ಕುಷ್ಟಗಿ ಬಸ್ ನಿಲ್ದಾಣ 7760973346
42 ಲಿಂಗಸುಗೂರು ಬಸ್ ನಿಲ್ದಾಣ 7760973300
43 ಮಂತ್ರಾಲಯ ಬಸ್ ನಿಲ್ದಾಣ 7760973307
44 ರಾಯಚೂರು ಬಸ್ ನಿಲ್ದಾಣ 7760973299
45 ಸಂಡೂರು ಬಸ್ ನಿಲ್ದಾಣ 7760973323
46 ಶಹಾಪುರ ಬಸ್ ನಿಲ್ದಾಣ 7760973339
47 ಸಿಂಧಗಿ ಬಸ್ ನಿಲ್ದಾಣ 7760973288
48 ಸಿಂಧನೂರು ಬಸ್ ನಿಲ್ದಾಣ 7760973301
49 ಸಿರಗುಪ್ಪ ಬಸ್ ನಿಲ್ದಾಣ 7760973330
50 ಯಾದಗಿರಿ ಬಸ್ ನಿಲ್ದಾಣ 7760973333
51 ಬಾಗಲಕೋಟೆ ಬಸ್ ನಿಲ್ದಾಣ 7760991783
52 ಬೆಳಗಾವಿ ಕೇಂದ್ರ ಬಸ್ ನಿಲ್ದಾಣ  7760991635
53 ಭಟ್ಕಳ ಬಸ್ ನಿಲ್ದಾಣ 08385-226444
54 ಚಿಕ್ಕೋಡಿ ಬಸ್ ನಿಲ್ದಾಣ 08338-272143
55 ಧಾರವಾಡ ಹೊಸ ಬಸ್ ನಿಲ್ದಾಣ 0836-2221086
56 ಗದಗ ಬಸ್ ನಿಲ್ದಾಣ 7760991833
57 ಹುಬ್ಬಳ್ಳಿ ಹೊಸ ಬಸ್ ನಿಲ್ದಾಣ  7760991682
58 ಹುಬ್ಬಳ್ಳಿ ಹಳೆ ಬಸ್ ನಿಲ್ದಾಣ 7760991662
59 ಇಳಕಲ್ ಬಸ್ ನಿಲ್ದಾಣ 08351-270261
60 ಕಾರವಾರ ಬಸ್ ನಿಲ್ದಾಣ 7760973437, 08382-226315
61 ಕುಮಟಾ ಬಸ್ ನಿಲ್ದಾಣ 7760991730
62 ಶಿರಸಿ ಹೊಸ ಬಸ್ ನಿಲ್ದಾಣ 08384-229952
63 ಶಿರಸಿ ಹಳೆ ಬಸ್ ನಿಲ್ದಾಣ 08384-226380

Sunday 6 November 2016

ಕನ್ನಡಮ್ಮನ ಅಳಲು ಕವನಕೆ ಪ್ರಥಮ ಬಹುಮಾನ ಮಾನಸ ಬಳಗದಿಂದ

ನನ್ನ ಕವನ "ಕನ್ನಡಮ್ಮನ ಅಳಲು" ಗೆ ಮಾನಸ ಪತ್ರಿಕಾ ಬಳಗ ಪ್ರಥಮ ಬಹುಮಾನಕೆ ಆಯ್ಕೆ ಮಾಡಿ ಪ್ರಶಸ್ತಿ ನೀಡಿ ಸನ್ಮಾನಿಸಿದ್ದೂ ಅಲ್ಲದೆ ಬಿಜಾಪುರದ ರಾಜ್ಯ ಮಟ್ಟದ ಕವಿಗೋಷ್ಠಿಗೂ ಆಯ್ಕೆ ಮಾಡಿದ  ಸಂಪಾದಕರಾದ ganesh kodur .ಅವರ ದಂಪತಿಗಳು  ಸಾಹಿತ್ಯ ಕೃಷಿ ಬದ್ದತೆ ಹೆಚ್ಚಿಸಿ ಪ್ರೋತ್ಸಾಹಿಸಿದಾರೆ .ಸಾಹಿತ್ಯ ಪರಿಷತ್ತಿನ ಸೀಟಿಗಾಗಿಯೇ ಇರುವವರ ನಡುವೆ ಯುವ ಸಾಹಿತಿಗಳನು ಸದಾ ಪೋಷಿಸುವ ಗಣೇಶ್ ಕೋಡೂರ್ ಅವರ ಕಾರ್ಯ ಶ್ಲಾಘನೀಯ. ನಾವು ಅವರಿಗೆ ಅಬಾರಿ. Pramod kumar pattar ಅವರೂ ತಮ್ಮ ಮನ್ವಂತರ ಟ್ರಸ್ಟ್.ಹಾಗೂ ಕೋಡೂರರ  ಬೆನಕ ಬುಕ್ಸ ಬ್ಯಾಂಕ್  ಈ ಕಾರ್ಯಕ್ರಮ ಹಲವು ಅಚ್ಚರಿಯೊಂದಿಗೆ ಅಚ್ಚುಕಟ್ಟಾಗಿ  ನಿರ್ವಹಿಸಿದ್ದು  ವಿಶೇಷ.

Wednesday 26 October 2016

ಸಾಮಾನ್ಯ ವಿಜ್ಞಾನ ತಿಳಿಯಿರಿ

*ಸಾಮಾನ್ಯ ವಿಜ್ಞಾನ*

1) ವಿಶ್ವದಲ್ಲಿ ಅತಿ ಹೆಚ್ಚಿನ
ಪ್ರಮಾಣದಲ್ಲಿರುವ ಮೂಲವಸ್ತು ಯಾವುದು?
* *ಜಲಜನಕ.*

2) ಅತಿ ಹಗುರವಾದ ಲೋಹ ಯಾವುದು?
* *ಲಿಥಿಯಂ.*

3) ಅತಿ ಭಾರವಾದ ಲೋಹ ಯಾವುದು?
* *ಒಸ್ಮೆನೆಯಂ.*

4) ಚಿನ್ನವನ್ನು ಶುದ್ಧೀಕರಿಸುವ ವಿಧಾನ
ಯಾವುದು?
* *ಸೈನೈಡೇಶನ್.*

5) ಅತಿ ಹಗುರವಾದ ಮೂಲವಸ್ತು ಯಾವುದು?
* *ಜಲಜನಕ.*

6) ಭೂಮಿಯ ವಾತಾವರಣದಲ್ಲಿ ಅತಿಹೆಚ್ಚಿನ
ಪ್ರಮಾಣದಲ್ಲಿರುವ ಮೂಲವಸ್ತು ಯಾವುದು?
* *ಸಾರಜನಕ.*

7) ಪ್ರೋಟಾನ್ ಕಂಡು ಹಿಡಿದವರು ಯಾರು?
* *ರುದರ್ ಫರ್ಡ್.*

8) ಭೂಮಿಯ ಮೇಲ್ಪದರಲ್ಲಿ ಅತಿ ಹೆಚ್ಚಿನ
ಪ್ರಮಾಣದಲ್ಲಿರುವ ಮೂಲವಸ್ತು ಯಾವುದು?
* *ಆಮ್ಲಜನಕ.*

9) ನ್ಯೂಟ್ರಾನ್ ಗಳನ್ನು ಕಂಡು ಹಿಡಿದವರು
ಯಾರು?
* *ಜೇಮ್ಸ್ ಚಾಡ್ ವಿಕ್.*

10) ಎಲೆಕ್ಟ್ರಾನ್ ಗಳನ್ನು ಕಂಡು ಹಿಡಿದವರು
ಯಾರು?
* *ಜೆ.ಜೆ.ಥಾಮ್ಸನ್.*

11) ಒಂದು ಪರಮಾಣುವಿನಲ್ಲಿರುವ
ಪ್ರೋಟಾನ್ ಅಥವಾ ಎಲೆಕ್ಟ್ರಾನ್ ಗಳ
ಸಂಖ್ಯೆಯೇ -----?
* *ಪರಮಾಣು ಸಂಖ್ಯೆ.*

12) ವಿಶ್ವದಲ್ಲಿ ಅತಿ ಹೆಚ್ಚು ದೊರೆಯುವ 2 ನೇ
ಮೂಲವಸ್ತು ಯಾವುದು?
* *ಹಿಲಿಯಂ.*

13) ಮೂರ್ಖರ ಚಿನ್ನ ಎಂದು ಯಾವುದನ್ನು
ಕರೆಯುತ್ತಾರೆ?
* *ಕಬ್ಬಿಣದ ಪೈರೆಟ್ಸ್.*

14) ಪೌಂಟೆನ್ ಪೇನ್ ನ ನಿಬ್ ತಯಾರಿಸಲು -----
ಬಳಸುತ್ತಾರೆ?
* *ಒಸ್ಮೆನಿಯಂ.*

15) ಪ್ರಾಚೀನ ಕಾಲದ ಮಾನವ ಮೊದಲ
ಬಳಸಿದ ಲೋಹ ಯಾವುದು?
* *ತಾಮ್ರ.*

16) ಉದು ಕುಲುಮೆಯಿಂದ ಪಡೆದ ಕಬ್ಬಿಣ
ಯಾವುದು?
* *ಬೀಡು ಕಬ್ಬಿಣ.*

17) ಚಾಲ್ಕೋಪೈರೇಟ್ ಎಂಬುದು ------- ದ
ಅದಿರು.
* *ತಾಮ್ರದ.*

18) ಟಮೋಟದಲ್ಲಿರುವ ಆಮ್ಲ ಯಾವುದು?
* *ಅಕ್ಸಾಲಿಕ್.*

20) "ಆಮ್ಲಗಳ ರಾಜ" ಎಂದು ಯಾವ
ಆಮ್ಲವನ್ನು ಕರೆಯುವರು?
* *ಸಲ್ಫೂರಿಕ್ ಆಮ್ಲ.*

21) ಕಾಸ್ಟಿಕ್ ಸೋಡದ ರಾಸಾಯನಿಕ
ಹೆಸರೇನು?
* *ಸೋಡಿಯಂ ಹೈಡ್ರಾಕ್ಸೈಡ್.*

22) "ಮಿಲ್ಖ್ ಆಫ್ ಮೆಗ್ನಿಷಿಯಂ" ಎಂದು
ಯಾವುದನ್ನು ಕರೆಯುವರು?
* *ಮೆಗ್ನಿಷಿಯಂ ಹೈಡ್ರಾಕ್ಸೈಡ್.*

23) ಅಡುಗೆ ಉಪ್ಪುವಿನ ರಾಸಾಯನಿಕ
ಹೆಸರೇನು?
* *ಸೋಡಿಯಂ ಕ್ಲೋರೈಡ್.*

24) ಗಡಸು ನೀರನ್ನು ಮೃದು ಮಾಡಲು -----
ಬಳಸುತ್ತಾರೆ?
* *ಸೋಡಿಯಂ ಕಾರ್ಬೋನೆಟ್.*

25) ಕೆಂಪು ಇರುವೆ ಕಚ್ಚಿದಾಗ ಉರಿಯಲು
ಕಾರಣವೇನು?
* *ಪಾರ್ಮಿಕ್ ಆಮ್ಲ.*

26) ಗೋಧಿಯಲ್ಲಿರುವ ಆಮ್ಲ ಯಾವುದು?
* *ಗ್ಲುಮಟಿಕ್.*

27) ಪಾಲಾಕ್ ಸೊಪ್ಪುವಿನಲ್ಲಿರುವ ಆಮ್ಲ
ಯಾವುದು?
* *ಪೋಲಿಕ್.*

28) ಸಾರಜನಕ ಕಂಡು ಹಿಡಿದವರು ಯಾರು?
* *ರುದರ್ ಪೊರ್ಡ್.*

29) ಆಮ್ಲಜನಕ ಕಂಡು ಹಿಡಿದವರು ಯಾರು?
* *ಪ್ರಿಸ್ಟೆ.*

30) ಗಾಳಿಯ ಆರ್ದತೆ ಅಳೆಯಲು ----
ಬಳಸುತ್ತಾರೆ?
* *ಹೈಗ್ರೋಮೀಟರ್.*

31) ಹೈಗ್ರೋಮೀಟರ್ ಅನ್ನು ----- ಎಂದು
ಕರೆಯುತ್ತಾರೆ?
* *ಸೈಕೋಮೀಟರ್.*

32) ಯಾವುದರ ವಯಸ್ಸು ಪತ್ತೆಗೆ ಸಿ-14
ಪರೀಕ್ಷೆ ನಡೆಸುತ್ತಾರೆ?
* *ಪಳೆಯುಳಿಕೆಗಳ.*

33) ಕೋಬಾಲ್ಟ್ 60 ಯನ್ನು ಯಾವ
ಚಿಕಿತ್ಸೆಯಲ್ಲಿ ಬಳಸುತ್ತಾರೆ?
* *ಕ್ಯಾನ್ಸರ್.*

34) ಡುರಾಲು ಮಿನಿಯಂ ಲೋಹವನ್ನು
ಯಾವುದರ ತಯಾರಿಕೆಯಲ್ಲಿ ಬಳಸುತ್ತಾರೆ?
* *ವಿಮಾನ.*

35) ನೀರಿನಲ್ಲಿ ಕರಗುವ ವಿಟಮಿನ್ ಗಳು
ಯಾವುವು?
* *ಬಿ & ಸಿ.*

36) ರಿಕೆಟ್ಸ್ ರೋಗ ಯಾರಲ್ಲಿ ಕಂಡು
ಬರುವುದು?
* *ಮಕ್ಕಳಲ್ಲಿ.*

37) ಕಾಮನ ಬಿಲ್ಲಿನಲ್ಲಿ ಅತಿ ಹೆಚ್ಚು
ಬಾಗಿರುವ ಬಣ್ಣ ಯಾವುದು?
* *ನೇರಳೆ.*

38) ಕಾಮನ ಬಿಲ್ಲಿನಲ್ಲಿ ಅತಿ ಕಡಿಮೆ ಬಾಗಿರುವ
ಬಣ್ಣ ಯಾವುದು?
* *ಕೆಂಪು.*

39) ಆಲೂಗಡ್ಡೆ ಯಾವುದರ
ರೂಪಾಂತರವಾಗಿದೆ?
* *ಬೇರು.*

40) ಮಾನವನ ದೇಹದ ಉದ್ದವಾದ ಮೂಳೆ
ಯಾವುದು?
* *ತೊಡೆಮೂಳೆ(ಫೀಮರ್).*

41) ವಯಸ್ಕರಲ್ಲಿ ಕೆಂಪು ರಕ್ತಕಣಗಳು
ಹುಟ್ಟುವ ಸ್ಥಳ ಯಾವುದು?
* *ಅಸ್ಥಿಮಜ್ಜೆ.*

42) ಲಿವರ್(ಯಕೃತ್)ನಲ್ಲಿ ಸಂಗ್ರಹವಾಗುವ
ವಿಟಮಿನ್ ಯಾವು?
* *ಎ & ಡಿ.*

43) ರಿಕೆಟ್ಸ್ ರೋಗ ತಗುಲುವ ಅಂಗ
ಯಾವುದು?
* *ಮೂಳೆ.*

44) ವೈರಸ್ ಗಳು ----- ಯಿಂದ
ರೂಪಗೊಂಡಿರುತ್ತವೆ?
* *ಆರ್.ಎನ್.ಎ.*

45) ತಾಮ್ರ & ತವರದ ಮಿಶ್ರಣ ಯಾವುದು?
* *ಕಂಚು.*

46) ತಾಮ್ರ & ಸತುಗಳ ಮಿಶ್ರಣ ಯಾವುದು?
* *ಹಿತ್ತಾಳೆ.*

47) ಎಲ್ ಪಿ ಜಿ ಯಲ್ಲಿರುವ ಪ್ರಮುಖ ಅನಿಲಗಳು
ಯಾವುವು?
* *ಬ್ಯೂಟೆನ್ & ಪ್ರೋಫೆನ್.*

48) ಚೆಲುವೆ ಪುಡಿಯ ರಾಸಾಯನಿಕ ಹೆಸರೇನು?
* *ಕ್ಯಾಲ್ಸಿಯಂ ಆಕ್ಸಿಕ್ಲೋರೈಡ್.*

49) ವನಸ್ಪತಿ ತುಪ್ಪ ತಯಾರಿಕೆಯಲ್ಲಿ
ಬಳಸುವ ಅನಿಲ ಯಾವುದು?
* *ಜಲಜನಕ.*

50) ಕಾಯಿಗಳನ್ನು ಹಣ್ಣು ಮಾಡಲು ಬಳಸುವ
ರಾಸಾಯನಿಕ ಯಾವುದು?
* *ಎಥಲಿನ್.*

51) ಆಳಸಾಗರದಲ್ಲಿ ಉಸಿರಾಟಕ್ಕೆ
ಆಮ್ಲಜನಕದೊಂದಿಗೆ ಬಳಸುವ ಅನಿಲ
ಯಾವುದು?
* *ಸಾರಜನಕ.*

52) ಭೂ ಚಿಪ್ಪಿನಲ್ಲಿ ಅಧಿಕವಾಗಿರುವ ಲೋಹ
ಯಾವುದು?
* *ಅಲ್ಯೂಮೀನಿಯಂ.*

53) ಹಾರುವ ಬಲೂನ್ ಗಳಲ್ಲಿ ಬಳಸುವ ಅನಿಲ
ಯಾವುದು?
* *ಹೀಲಿಯಂ.*

54) ಪರಿಶುದ್ಧವಾದ ಕಬ್ಬಿಣ ಯಾವುದು?
* *ಮ್ಯಾಗ್ನಟೈಟ್.*

55) ಅಗ್ನಿಶಾಮಕಗಳಲ್ಲಿ ಬಳಸುವ ಅನಿಲ
ಯಾವುದು?
* *ಕಾರ್ಬನ್ ಡೈ ಆಕ್ಸೈಡ್.*

56) ಮೃದು ಪಾನಿಯಗಳಲ್ಲಿ ಬಳಸುವ ಅನಿಲ
ಯಾವುದು?
*ಕಾರ್ಬೋನಿಕ್ ಆಮ್ಲ.*

57) ಹಣ್ಣಿನ ರಸ ಸಂರಕ್ಷಿಸಲು ಬಳಸುವ
ರಾಸಾಯನಿಕ ಯಾವುದು?
*ಸೋಡಿಯಂ ಬೆಂಜೋಯಿಟ್.*

58) "ಆತ್ಮಹತ್ಯಾ ಚೀಲ"ಗಳೆಂದು ------
ಗಳನ್ನು ಕರೆಯುತ್ತಾರೆ?
* *ಲೈಸೋಜೋಮ್*

59) ವಿಟಮಿನ್ ಎ ಕೊರತೆಯಿಂದ ----
ಬರುತ್ತದೆ?
*ಇರುಳು ಕುರುಡುತನ*

60) ಐಯೋಡಿನ್ ಕೊರತೆಯಿಂದ ಬರುವ ರೋಗ
ಯಾವುದು?
*ಗಳಗಂಡ (ಗಾಯಿಟರ್)*

Friday 14 October 2016

ಕೃಷಿ ಉದ್ಯಮಾಧಿಪತ್ಯ ಯಾರ ಕೈಲಿದೆ..?

ಕೃಷಿ ಉಧ್ಯಮಾಧಿಪತ್ಯ ಯಾರ ಕೈಲಿದೆ...?

ರೈತರಿಗಾಗಿ ಸ್ವತಂತ್ರ ಭಾರತದಲ್ಲಿ 60 ವರ್ಷಗಳಿಂದ  ಅದೆಷ್ಟು ಯೋಜನೆಗಳು ಬಂದಿವೆ.ಅದೆಷ್ಟು ಸಹಸ್ರ ಲಕ್ಷ ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಲಾಗಿದೆ ಎಂದು ಲೆಕ್ಕ ಹಾಕಿದರೆ ಭಾರತದ ರೈತರಿಗೆ ಅದನ್ನು ನೇರವಾಗಿ ಹಂಚಿದ್ದರೆ ಅವರೆಲ್ಲ  ಲಕ್ಷಾದೀಶರಾಗಿ ಇರುತ್ತಿ ದರು.ಆದರೆ ಹಾಗಾಗಲೇ ಇಲ್ಲ. ಬದಲಾಗಿ ಕೃಷಿ ಭೂಮಿ ಕಾರ್ಖಾನೆ, ರಿಯಲ್ ಎಸ್ಟೇಟ್ ಉದ್ಯಮ ಕ್ಕೆ ಬಲಿಯಾಯಿತು.
ಆದರೆ ಹಣ ಏನಾಯಿತು . .? ರೈತರ ಹೆಸರಿನ ಯೋಜನೆಗಳ ಹಣ ಅನುಷ್ಠಾನದ ಮಾರ್ಗದಲ್ಲಿಯೇ ಮಂತ್ರಿಗಳು. ರಾಜಕೀಯ ಪಕ್ಷಗಳ ನಾಯಕರು, ಅಧಿಕಾರ ಶಾಹಿಗಳು... ಉದ್ಯಮಿಗಳ ಮನೆ ಸೇರಿ ಅವರ ಆಸ್ತಿ  ಏಣಿಸಲಾಗದಷ್ಟು ಬೆಳೆಯಿತೇ ಹೊರತು ರೈತ ಉದ್ದಾರ ಸಾಧ್ಯ ಆಗಲಿಲ್ಲ.
       ತಾವು ದುಡಿದು ಬಂಡವಾಳ ಹೂಡಿಕೆ ಮಾಡಿ ತಮ್ಮ ಹೊಲದಲಿ ಬೆಳೆಬೆಳೆದ ಬೆಳೆಗೆ ರೈತರಿಗೆ ಲಾಭದ ಬೆಲೆಗೆ ಮಾರಾಟ ಮಾಡುವ  ವ್ಯವಸ್ಥೆ ಇಲ್ಲ. ಆದರೆ ಯಾರನ್ನೋ ದುಡಿಸಿ... ಯಾರದೋ ಕಚ್ಚಾ ವಸ್ತು ಬಳಸುವ ಕಾರ್ಖಾನೆ ಮಾಲೀಕರು, ಉದ್ಯಮಿಗಳು ತಮ್ಮ ಉತ್ಪನ್ನ ವನ್ನು ತಮಗಿಷ್ಟ ಬಂದ ಲಾಭಕ್ಕೆ ಮಾರಾಟ ಮಾಡುವ ವ್ಯವಸ್ಥೆ ಇದೆ. ಇದೆಂತ ನ್ಯಾಯ..?
   ರೈತರ ಉತ್ಪನ್ನಗಳ ಬೆಲೆ ಆತನೇ ನಿರ್ಧರಿಸುವಂತಾಗಿ  ರೈತನಿಗೆ ಸೂಕ್ತ ಲಾಭ ತರುವಂತೆ ಮಾಡುವುದು ನಮ್ಮ ವ್ಯವಸ್ಥೆಯಲ್ಲಾಗಲೇ ಬೇಕಾದ ತುರ್ತು ಬದಲಾವಣೆ ಆಗಿದೆ. ಆದರೆ ಕೃಷಿಯೂ ಉಧ್ಯಮವೆಂದು ಪರಿಗಣಿಸಿ ಕೃಷಿ ಉಧ್ಯಮಾಧಿಪತ್ಯ ರೈತರೇ ಸಾದಿಸುವಂತಾಗುವುದು ಸಾಧ್ಯವೇ...? ನಮ್ಮ ಮಾರುಕಟ್ಟೆಯ ಮೇಲೆ ಹಿಡಿತ ಸಾಧಿಸಿರುವ ವರ್ತಕರ ಗುಂಪು ಇದಕ್ಕೆ ಅವಕಾಶ ನೀಡದು.ಕಬ್ಫು. ಅಡಿಕೆ, ತೆಂಗು,ಹತ್ತಿ.. ತೊಗರಿ ಯಂತಹ ಬೆಳೆ ಮಾರುಕಟ್ಟೆಯೇ ದೊಡ್ಡ ದೊಡ್ಡ  ರಪ್ತುದಾರರ ಹಿಡಿತದಲ್ಲಿದ್ದು ಅದು ಯಾವಾಗ ಬೇಕಾದರೂ ಬೆಲೆ ಏರಿಕೆ, ಇಳಿಕೆ ಮಾಡುವ.... ಕೃತಕ ಅಭಾವ ಸೃಷ್ಟಿಸಿ ಮಾರುಕಟ್ಟೆ ನಿಯಂತ್ರಣ ಮಾಡುವ   ಅವರ ಚಿದಂಬರ ರಹಸ್ಯ ಬಯಲು ಮಾಡಲು ನಮ್ಮ ರೈತ ಒಕ್ಕೂಟ ಗಳು ಮುಂದಾಗಬೇಕು. ಇಲ್ಲವಾದರೆ ರೈತರೆಂದೂ ಕೃಷಿ ಉತ್ಪನ್ನ ಮಾರುಕಟ್ಟೆ ಯ ಹಾವು ಏಣಿ ಆಟ ಆಡುತ್ತ, ನೋಡುತ್ತ ಕೂರಬೇಕಷ್ಟೇ...
ನಿಮ್ಮ ಅನಿಸಿಕೆ ಇದೇ ಆಗಿದ್ದರೆ ಶೇರ್ ಮಾಡಿ. ಆಗದಿದ್ದರೂ ಶೇರ್ ಮಾಡಬಹುದು...
@ ರವಿರಾಜ್ ಸಾಗರ್.

Friday 7 October 2016

ಅಮುಕ್ತ

ಅಮುಕ್ತ.... ತಾಯಿ ಗೂಡು ತೊರೆದು ಬಾನಿಗೆ ಹಾರಿದ ಹಕ್ಕಿಗೆ ಮತ್ತೆಂದೂ ತಾಯಗೂಡೇ ಹಿತವೆನಿಸದೇ.? ಎಲ್ಲ ತೊರೆದ ಸನ್ಯಾಸಿ ಮಠದೊಳಗೆ ಮಿನುಗುವ ಹಣ ಹೆಣ್ಣಿಗೆ ಸೋಲದೆ ಹೇಗಿರುವನು....? ಸತ್ಯ,ನಿಷ್ಠೆ, ಪ್ರಾಮಾಣಿಕ ತೆ ಬೋದಿಸಿ ಗೆದ್ದ ರಾಜಕಾರಣಿ ಮುಕ್ತವಾಗಿ ಉಳಿದಾನೆಯೇ..? ಬುದ್ದ ಬಸವ ಏಸು ಮಹಮದ್ ....ಅದೆಷ್ಟು ಜನ ಬಂದು ಅದೆಷ್ಟು ಧರ್ಮ ಚಳುವಳಿ ಮಾಡಿಹೋದರೂ.... ಜನ ಸ್ವಾರ್ಥ ಗಡಿ ಮುಕ್ತರಾದರೇ..? ಜಗದ ತುಂಬಾ ಗುಡಿ ಚರ್ಚು ಮಸೀದಿ ಎದ್ದವಾದರೂ .ನ್ಯಾಯ. ನೀತಿ ಸಹಬಾಳ್ವೆ , ಶಾಂತಿ ನೆಲೆಸೀತೇ..? ಹೇ...ಬುಧ್ಧ... ನಿಜ. ಹೇಳು.... ನಿನಗೆ ಮತ್ತೆಂದೂ ಸಂಸಾರ ಭವ ಬಂಧನದಲಿ ಅದೇನೋ..... ಇದೆ ; ಎಂದು ಮತ್ತೆಂದೂ ಅನಿಸಲೇ ಇಲ್ಲವೇ..? ಬದುಕಿ ಸಾದಿಸುವಾಸೆಯಿಲ್ಲದ ದೇಹ ಬದುಕುವುದೇಕೆ...? ಮುಕ್ತಿಗಾಗಿ ಹಂಬಲಿಸಿ ಮನುಜ ಏನೆಲ್ಲ ಮಾಡಿದರೂ ಏನಾಗಿಹನಿಂದು...? ನರಗುಣವ ಹರನಿಗೂ ಬದಲಿಸಲಾಗಲಿಲ್ಲ ಜಗವನ್ನೇ ನರ ಬದಲಾಯಿಸಿಹನು. ರವಿರಾಜ್ ಸಾಗರ್..