ಮಕ್ಕಳ ಮಂದಾರ -ಮಕ್ಕಳ ತೋಟದ ಬರಹಗಳ ಪದ ಮಾಲೆ

Monday, 13 November 2023

ದೆಹಲಿ ರಾಷ್ಟ್ರೀಯ ಮಕ್ಕಳ ಸಾಹಿತ್ಯ ಸಮ್ಮೇಳನಕ್ಕೆ ಆಯ್ಕೆ




*ದೆಹಲಿ ರಾಷ್ಟ್ರೀಯ ಮಕ್ಕಳ ಸಾಹಿತ್ಯ ಸಮ್ಮೇಳನಕ್ಕೆ  ಆಯ್ಕೆ* .


ದೆಹಲಿಯಲ್ಲಿ ನಡೆಯುತ್ತಿರುವ  ರಾಷ್ಟ್ರೀಯ ಮಕ್ಕಳ ಸಾಹಿತ್ಯ ಸಮ್ಮೇಳನಕ್ಕೆ ಶಿವಮೊಗ್ಗ ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ತು ಘಟಕದಿಂದ  ಸಾಗರ ತಾಲೂಕಿನ  ಮಕ್ಕಳು, ಡೊಳ್ಳು ಕುಣಿತ, ವಿಚಾರಗೋಷ್ಠಿಗೆ ಆಯ್ಕೆಯಾಗಿದ್ದಾರೆ. ಗೌತಮಪುರದ ಮಲೆನಾಡು ಪ್ರೌಢಶಾಲೆಯ ಮಕ್ಕಳು ಡೊಳ್ಳು ಕುಣಿತ ಪ್ರದರ್ಶನ ನೀಡಲಿದ್ದಾರೆ. ಸಾಗರದ ಬಿಇಓ ಪರಶುರಾಮ, ಜಿಲ್ಲಾ ಅಧ್ಯಕ್ಷರಾದ ರವಿರಾಜ್ ಸಾಗರ್ ಮಂಡಗಳಲೆ, ಸಾಗರ ತಾಲೂಕು ಅಧ್ಯಕ್ಷ ಕಿಶೋರ್ ಕುಮಾರ್ ಬೈರಾಪುರ,  ಗೌತಮರದ ಗ್ರಾಮಸ್ಥರು, ಪೋಷಕರು, ಮಲೆನಾಡು ಪ್ರೌಢಶಾಲೆಯ ಅಧ್ಯಕ್ಷರು ಮತ್ತು ಶಿಕ್ಷಕರ ಬಳಗ ,ಗೌತಮ ಪುರದ ಗ್ರಾಮ ಪಂಚಾಯಿತಿ ವತಿಯಿಂದ  ಮಕ್ಕಳಿಗೆ ಶುಭ ಹಾರೈಸಿದ್ದಾರೆ.  

ಸಂಸದರಾದ ಬಿ ವೈ ರಾಘವೇಂದ್ರ, ಸಾಗರದ ಶಾಸಕರಾದ ಬೇಳೂರು ಗೋಪಾಲಕೃಷ್ಣ, ಶಾಶಕ ಭೀಮಣ್ಣ ನಾಯ್ಕ, ಮತ್ತಿತರ ಮುಖಂಡರು ಮಕ್ಕಳ ಪ್ರತಿಭೆಗೆ  ಶ್ಲಾಘಿಸಿದ್ದಾರೆ


Thursday, 5 October 2023

ಸುಳ್ಳೂರ ಶಾಲಾ ಮಕ್ಕಳ ಮಂತ್ರಿ ಮಂಡಲದಿಂದ ಪಂಚಾಯಿತಿಗೆ ವಿವಿಧ ಬೇಡಿಕೆಗಳ ಮನವಿ

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸುಳ್ಳೂರು ಶಾಲಾ ಮಕ್ಕಳ ಮಂತ್ರಿಮಂಡಲದಿಂದ ಶಾಲೆಯಲ್ಲಿ ಆಟದ ಮೈದಾನ, ವಿವಿಧ ಕ್ರೀಡಾಂಗಣ, ಶಾಲಾ ಪ್ರಾರ್ಥನ ಅಂಕಣದಲ್ಲಿ ಸಿಮೆಂಟ್ ಬ್ರಿಕ್ಸ್ ಅಳವಡಿಕೆ ಬಗ್ಗೆ ಮನವಿ ಸಲ್ಲಿಸಲಾಯಿತು. ಸೈದುರ್ ಗ್ರಾಮ ಪಂಚಾಯಿತಿ ಪಿಡಿಒ ಲತಾರಾಣಿ , ಪಂಚಾಯತಿ ಉಪಾಧ್ಯಕ್ಷರಾದ ಶಿವಕುಮಾರ್ ಅವರು, ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಗ್ರಾಮಸ್ಥರು ಮತ್ತು ಶಾಲಾ ಶಿಕ್ಷಕರು ಹಾಜರಿದ್ದರು.


ಮಕ್ಕಳ ಮನೆ ಮನೆಗೆ marks rigister app

📱 'ಮಾರ್ಕ್ಸ್ ರಿಜಿಸ್ಟರ್' (Marks Register) ಆ್ಯಪ್ !!   ಶಿಕ್ಷಕರ ಶ್ರಮಕ್ಕೆ ತಂತ್ರಜ್ಞಾನದ ಆಸರೆ! ಶಿಕ್ಷಕರ ಕೆಲಸ ಇಂದು ಮುಂಚಿನಂತಿಲ್ಲ. ಬದಲಾಗುತ್ತಿರುವ...